Advertisement
MIRROR FOCUS

ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿ

Share

ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನದಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿಯನ್ನು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ಜ. 20, 2025 ರವರೆಗೆ ಅನುಮೋದನೆಯನ್ನು ನೀಡಿದೆ. ಈಗಿನ ನಿಮಯಗಳ  ಅಡಿಯಲ್ಲಿ, ತೆಂಗಿನಕಾಯಿಗಳು ಸುಡುವ ಕಾರಣದಿಂದ ಕ್ಯಾಬಿನ್ ನಲ್ಲಿ ಸಾಗಿಸಲು ಅನುಮತಿ ಇರಲಿಲ್ಲ.

ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ನಿಯಮಗಳ ಪ್ರಕಾರ ಭದ್ರಾ ಸಿಬಂದಿಗಳು ತೆಂಗಿನಕಾಯಿಯನ್ನು ವಿಮಾನದಲ್ಲಿ ಸಾಗಿಸಲು ಅವಕಾಶ ನೀಡುತ್ತಿರಲಿಲ್ಲ. ಆದರೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹೋಗುವ ಯಾತ್ರಾರ್ಥಿಗಳು ಜನವರಿ 20, 2025 ರವರೆಗೆ ವಿಮಾನಗಳಲ್ಲಿ  ಕ್ಯಾಬಿನ್ ಸಾಮಾನುಗಳಲ್ಲಿ ತೆಂಗಿನಕಾಯಿಯನ್ನು ಸಾಗಿಸಬಹುದು ಮತ್ತು ವಿಮಾನಯಾನದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ಸೀಮಿತ ಅವಧಿಗೆ ತನ್ನ ಅನುಮೋದನೆಯನ್ನು ನೀಡಿದೆ.

ಆದರೆ ಉಳಿಂದತೆ ಯಾನದಲ್ಲಿ ಅಗತ್ಯವಿರುವ ಎಕ್ಸ್-ರೇ, ಎಕ್ಸ್‌ಪ್ಲೋಸಿವ್ ಟ್ರೇಸ್ ಡಿಟೆಕ್ಟರ್ ಮತ್ತು ಇತರ ತಪಾಸಣೆಗಳ ನಂತರ ಮಾತ್ರ ತೆಂಗಿನಕಾಯಿಯನ್ನು  ಸಾಗಿಸಲು ಅನುಮತಿಸಲಾಗುತ್ತದೆ. ಶಬರಿಮಲೆಯ ಅಯ್ಯಪ್ಪ ದೇವಾಲಯವು ನವೆಂಬರ್ ನಂತರದ ಎರಡು ತಿಂಗಳ  ತೀರ್ಥಯಾತ್ರೆಗಾಗಿ ತೆರೆಯುತ್ತದೆ. ಈ ಸಮಯದಲ್ಲಿ ಅನೇಕ ಸಂಖ್ಯೆಯ ಭಕ್ತಾದಿಗಳು ಆಗಮಿಸುತ್ತಾರೆ. ಹೀಗೆ ಬರುವ ಎಲ್ಲಾ ಭಕ್ತಾದಿಗಳು ಇರುಮುಡಿಯೊಂದಿಗೆ ಬರುತ್ತಾರೆ. ಇರುಮಡಿಯಲ್ಲಿ ತೆಂಗಿನಕಾಯಿಯೂ ಇರುತ್ತದೆ. ಶಬರಿಮಲೆ ಯಾತ್ರೆಗೆ ಇದು ಅಗತ್ಯ ಹಾಗೂ ಅನಿವಾರ್ಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

60 minutes ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

8 hours ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

15 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

15 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

23 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

1 day ago