ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನದಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿಯನ್ನು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ ಜ. 20, 2025 ರವರೆಗೆ ಅನುಮೋದನೆಯನ್ನು ನೀಡಿದೆ. ಈಗಿನ ನಿಮಯಗಳ ಅಡಿಯಲ್ಲಿ, ತೆಂಗಿನಕಾಯಿಗಳು ಸುಡುವ ಕಾರಣದಿಂದ ಕ್ಯಾಬಿನ್ ನಲ್ಲಿ ಸಾಗಿಸಲು ಅನುಮತಿ ಇರಲಿಲ್ಲ.
ಸಿವಿಲ್ ಏವಿಯೇಷನ್ ಸೆಕ್ಯುರಿಟಿ ನಿಯಮಗಳ ಪ್ರಕಾರ ಭದ್ರಾ ಸಿಬಂದಿಗಳು ತೆಂಗಿನಕಾಯಿಯನ್ನು ವಿಮಾನದಲ್ಲಿ ಸಾಗಿಸಲು ಅವಕಾಶ ನೀಡುತ್ತಿರಲಿಲ್ಲ. ಆದರೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹೋಗುವ ಯಾತ್ರಾರ್ಥಿಗಳು ಜನವರಿ 20, 2025 ರವರೆಗೆ ವಿಮಾನಗಳಲ್ಲಿ ಕ್ಯಾಬಿನ್ ಸಾಮಾನುಗಳಲ್ಲಿ ತೆಂಗಿನಕಾಯಿಯನ್ನು ಸಾಗಿಸಬಹುದು ಮತ್ತು ವಿಮಾನಯಾನದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ ಸೀಮಿತ ಅವಧಿಗೆ ತನ್ನ ಅನುಮೋದನೆಯನ್ನು ನೀಡಿದೆ.
ಆದರೆ ಉಳಿಂದತೆ ಯಾನದಲ್ಲಿ ಅಗತ್ಯವಿರುವ ಎಕ್ಸ್-ರೇ, ಎಕ್ಸ್ಪ್ಲೋಸಿವ್ ಟ್ರೇಸ್ ಡಿಟೆಕ್ಟರ್ ಮತ್ತು ಇತರ ತಪಾಸಣೆಗಳ ನಂತರ ಮಾತ್ರ ತೆಂಗಿನಕಾಯಿಯನ್ನು ಸಾಗಿಸಲು ಅನುಮತಿಸಲಾಗುತ್ತದೆ. ಶಬರಿಮಲೆಯ ಅಯ್ಯಪ್ಪ ದೇವಾಲಯವು ನವೆಂಬರ್ ನಂತರದ ಎರಡು ತಿಂಗಳ ತೀರ್ಥಯಾತ್ರೆಗಾಗಿ ತೆರೆಯುತ್ತದೆ. ಈ ಸಮಯದಲ್ಲಿ ಅನೇಕ ಸಂಖ್ಯೆಯ ಭಕ್ತಾದಿಗಳು ಆಗಮಿಸುತ್ತಾರೆ. ಹೀಗೆ ಬರುವ ಎಲ್ಲಾ ಭಕ್ತಾದಿಗಳು ಇರುಮುಡಿಯೊಂದಿಗೆ ಬರುತ್ತಾರೆ. ಇರುಮಡಿಯಲ್ಲಿ ತೆಂಗಿನಕಾಯಿಯೂ ಇರುತ್ತದೆ. ಶಬರಿಮಲೆ ಯಾತ್ರೆಗೆ ಇದು ಅಗತ್ಯ ಹಾಗೂ ಅನಿವಾರ್ಯವಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…