Advertisement
ಅನುಕ್ರಮ

ಕೃಷಿ ಕ್ಷೇತ್ರೋತ್ಸವ | ಅಡಿಕೆ ಬೆಳೆ ನಿರ್ವಹಣಾ ಸಂವಾದ | ಬದಲಾಗುತ್ತಿರುವ ಕೃಷಿ ಪದ್ಧತಿಯ ಸೂಚನೆ |

Share

ವಾಸು ಪೂಜಾರಿಯವರ ತೋಟದಲ್ಲಿ ಸಿಪಿಸಿಆರ್‌ ಐ ವತಿಯಿಂದ ನಡೆದ ಅಡಿಕೆ ಬೆಳೆ ನಿರ್ವಹಣಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿಕರಲ್ಲಿ ನಾನೂ ಒಬ್ಬ. ವಾಸು ಅಣ್ಣನ ಅಡಿಕೆ ತೋಟ ಮತ್ತು ಕಾಳುಮೆಣಸಿನ ನಿರ್ವಹಣಾ ಕ್ರಮ ಎಂಥವರನ್ನೂ ಮನಸೂರೆಗೊಳ್ಳುವಂತೆ ಇದೆ. ಇಡೀ ಕಾರ್ಯಕ್ರಮದ ಬಳಿಕ ಅವಲೋಕನ ಮಾಡಿದಾಗ ಕೃಷಿ ಪದ್ದತಿ ಬದಲಾಗುತ್ತಿರುವುದು  ಕಂಡು ಪುಳಕವಾಯಿತು.

ಉದ್ಘಾಟನಾ ಕಾರ್ಯಕ್ರಮಕ್ಕೆ ಭಾಗವಹಿಸಬೇಕೆಂದು ತುಡಿತದಲ್ಲಿ ಇದ್ದೆ,ಆದರೆ ಅನಿವಾರ್ಯ ಕಾರಣದಿಂದ ತಲುಪುವಾಗ 11:30 ಆಯ್ತು. ಹಾಗಾಗಿ ನೇರವಾಗಿ ಡಾ ಭವಿಷ್ಯ ಅವರ ಪಾಠದ ಮಾತುಗಳೇ ನನಗೆ ಮೊದಲಾಗಿ ಸಿಕ್ಕಿತು. ಅವರ ವಿವರಣಾ ಕ್ರಮಕ್ಕೆ ಎರಡು ಮಾತಿಲ್ಲ .ವಿವರಣೆಗಳ ಮಧ್ಯದಲ್ಲಿ ಬಂದ ಒಂದು ಮಾತು, ಯಾವ ಕಾರಣಕ್ಕೂ ಹುಲ್ಲನ್ನು ಕಳೆಯೆಂದು ತಿಳಿಯದಿರಿ.ಅದು ಕ್ರಾಂತಿ.ಹುಲ್ಲು ಮಾಡುವ ಕೆಲಸ ಹುಲ್ಲಿನಿಂದಲೇ ನಡೆಯಬೇಕಷ್ಟೆ ವಿನಃ ಬೇರೆ ಇನ್ನು ಯಾವುದೇ ಬದಲಿ ವ್ಯವಸ್ಥೆ ಇಲ್ಲ. ನಮ್ಮ ಮನೆಯಲ್ಲಿಯೇ ನನ್ನ ಅಪ್ಪ ರೌಂಡಪ್ ಬಿಟ್ಟು ಆದ ದೋಷದ ಪರಿಣಾಮದಿಂದ ಈ ಮಾತನ್ನು ಹೇಳುತ್ತಿದ್ದೇನೆ ಎಂದರು. ಕೀಟ-ರೋಗ ಬಾಧೆ ಗಳ ನಿರ್ವಹಣೆಯ ಬಗ್ಗೆ ವಿಜ್ಞಾನಿ ರಾಜಕುಮಾರ್ ಅವರು ಚೆನ್ನಾಗಿ ವಿವರಿಸಿದರು. ಸಾಧ್ಯವಾದಷ್ಟು ರಾಸಾಯನಿಕಗಳನ್ನು ಬಳಸಬೇಡಿ ಅನಿವಾರ್ಯ ಆದರೆ ಮಾತ್ರ ಬಳಸಿ ಅಂದರು. ರಾಸಾಯನಿಕಗಳು ಪ್ರಕೃತಿಗೆ ಮಾರಕ ಎಂಬುದನ್ನು ಒತ್ತಿ ಒತ್ತಿ ತಿಳಿಸಿದರು.

ಸುರೇಶಚಂದ್ರರ ವಿವರಣ ಸಾಮರ್ಥ್ಯ ವಂತೂ ಅದ್ಭುತ. ಯುದ್ಧೋತ್ಸಾಹದಲ್ಲಿ ಕೆಲಸ ಮಾಡಿ ಹಾಗಾದರೆ ಮುಂದಿನ ಜೀವನದ ನೆಮ್ಮದಿಗೆ ಪೂರಕ ಎಂಬುದನ್ನು ತನ್ನ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿಯ ಬಗ್ಗೆ ಅತ್ಯುತ್ತಮವಾಗಿ ವಿವರಿಸಿದರು. ಅವರು ಕಂಡ ಹೊಸ ತಳಿಯು ಏಪ್ರಿಲಿನಲ್ಲಿಯೇ ಹಣ್ಣಾಗಲು ಸುರುವಾಗುವ ಕಾರಣ ಮಳೆಗಾಲದ ಆರಂಭದಲ್ಲಿಯೇ ಹೆಚ್ಚಿನ ಫಸಲು ಒಣಗಿ ಸಿಗುವುದು ತುಂಬಾ ಲಾಭಕರ ಎಂಬ ಹೊಸ ವಿಷಯ ನನಗೆ ಸಿಕ್ಕಿತು.

ವಿಷ್ಣುಭಟ್ಟರ ಸ್ವತಹ ಮದ್ದು ಬಿಡುವುದರಿಂದ ಹಿಡಿದು ತಾನು ಮಾಡುವ ಕೆಲಸದ ಬಗೆಗಿನ ಸ್ವಸಾಮರ್ಥ್ಯವನ್ನು ವಿವರಿಸುವುದರ ಒಂದಿಗೆ ವಿಜ್ಞಾನಿಗಳ ಮಾತಿನಂತೆ ನಡೆದುದರ ಪರಿಣಾಮ ತನ್ನ ಅಡಿಕೆ ಕೃಷಿ ಇಂದು ಚೆನ್ನಾಗಿ ಉಳಿಯಿತು ಎಂಬ ಮಾಹಿತಿಯನ್ನು ಕೊಟ್ಟರು. ಔಷಧಿ ಹೊಡೆದುದರ ಪರಿಣಾಮವಾಗಿ ತನ್ನ ಎಂಟು ಜೇನು ಪೆಟ್ಟಿಗೆಗಳು ಮಟಾಶ್ ಆಯಿತು ಎಂದು ಹೇಳುವಾಗ ಮೊದಲೇ ಹಸಿದಿದ್ದ ನನ್ನ ಹೊಟ್ಟೆ ಮತ್ತಷ್ಟು ನೋವಿನಿಂದ ಚುರುಗುಟ್ಟಿತು. ಆ ನಂತರದಲ್ಲಿ ತಾನು ವಿಷವನ್ನು ಪ್ರಯೋಗಿಸಲಿಲ್ಲ ಎಂಬುದನ್ನು ಒತ್ತಿ ಹೇಳಿದರು.

40 ವರುಷದ ಹಿಂದೆ ಸಾವಯವದ ರೈತರಿಗೆ ರಾಸಾಯನಿಕಗಳನ್ನು ಬಳಸಲು ಪ್ರೇರೇಪಿಸಿದಂತೆ, ಮತ್ತೆ ಇಂದು ರಾಸಾಯನಿಕಗಳನ್ನು ಕಡಿಮೆ ಮಾಡಿ ಸಾವಯವ ವಸ್ತುಗಳ ಬಗ್ಗೆ ಹೆಚ್ಚಿನ ಗಮನವನ್ನು ವಿಜ್ಞಾನಿಗಳು ನೀಡುತ್ತಿರುವುದನ್ನು ನಾನು ಕಂಡೆ. ಬೋರೋನ್ ಕೊರತೆಯಿಂದ ಆಗುವ ಸೋಗೆ ಗಿಡ್ಡ ಮರಗಳು ರಾಸಾಯನಿಕವನ್ನು ಹೆಚ್ಚಾಗಿ ಬಳಸುವ ತೋಟಗಳಲ್ಲಿ ಪ್ರತಿಶತ 30ರಷ್ಟು ಇರುತ್ತವೆ ಎಂಬ ಮಾಹಿತಿ ನನಗಿರಲಿಲ್ಲ. ಶಂಖದಿಂದ ಬಂದುದೇ ತೀರ್ಥವಾಗುವ ಕಾರಣ ಶಂಖ ತೀರ್ಥ ಅಲ್ಲಲ್ಲಿ ಆಗಾಗ ಇಂತಹ ಗೋಷ್ಠಿಗಳ ಮೂಲಕ ಉದ್ಭವ ಆಗಲಿ ಎಂದು ಹಾರೈಸುತ್ತೇನೆ.

ನಾನು ಗಮನಿಸಿದಂತೆ, ಒಂದು ತಲೆಮಾರು ಆಧುನಿಕ ಕೃಷಿಗೆ ಪಾದಾರ್ಪಣೆ ಮಾಡಿ ಇನ್ನೊಂದು ತಲೆಮಾರು ಅದರ ಉತ್ತುಂಗದಲ್ಲಿಇದೆ. ಈ ಮಧ್ಯದಲ್ಲಿ ಕೃಷಿಯೂ ಅನೇಕ ಮಾರ್ಪಾಡುಗಳನ್ನು ಏಳುಬೀಳುಗಳನ್ನೂ ಕಂಡಿದೆ. ಅದೇ ಹೊತ್ತಿನಲ್ಲಿ ಆಧುನಿಕ ಕೃಷಿಯನ್ನು ರಾಸಾಯನಿಕಗಳನ್ನು ಬೋಧಿಸಿದ ವಿಜ್ಞಾನಿಗಳ ತಂಡ ಕೂಡ ನಿರ್ಗಮಿಸಿದೆ. ಯುವ ವಿಜ್ಞಾನಿಗಳ ತಂಡ ಆಧುನಿಕದ ಭೀಕರತೆಯನ್ನು ಗಮನಿಸಿ ಸಾಧ್ಯವಾದಷ್ಟು ಸಹಜತೆಯ ಕಡೆಗೆ ಒಲವು ತೋರಿಸುವಂತೆ ಕಂಡಿತು. ಎಷ್ಟೋ ರಾಸಾಯನಿಕಗಳು ವಿದೇಶಗಳಿಂದ ಬರಬೇಕಾಗುತ್ತದೆಯಂತೆ. ರಾಜಕೀಯ ವಿಪ್ಲವಗಳು,ವಿದೇಶಿ ಮನಸ್ಥಿತಿ ಗಳಿಂದಾಗಿ ಅವು ಬಾರದೇ ಇದ್ದರೂ ನಮ್ಮ ಕೃಷಿ ಸದೃಢವಾಗಿ ಬೆಳೆಯುವಂತೆ ಇರಲಿ ಎಂದು ತಿಳಿಸಿದರು. ಅವರುಗಳಿಗೆ ಯಶಸ್ಸು ಸಿಗಲಿ ಮತ್ತು ಪ್ರಕೃತಿ ಉಳಿಯಲಿ.

ಕೊರೋನಾ ಕಾರಣದಿಂದ ನಡೆಯದ ಅನೇಕ ಕೃಷಿ ಮಿತ್ರರ ಭೇಟಿ ಈ ಕಾರಣದಿಂದ ಇಂದು ನಡೆಯಿತು.

# ಎ.ಪಿ. ಸದಾಶಿವ. ಮರಿಕೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

14 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

20 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

21 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

21 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

21 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

21 hours ago