Advertisement
ಸುದ್ದಿಗಳು

ಸಾಗರಗಳ ರಕ್ಷಣಗೆ ನಿರ್ಧಾರ | ವಿಶ್ವಸಂಸ್ಥೆ ಸದಸ್ಯ ರಾಷ್ಟ್ರಗಳ ಒಕ್ಕೊರಲ ಒಪ್ಪಂದ |

Share

ವಿಶ್ವದ ಸಾಗರಗಳು ಮತ್ತು ಅವುಗಳಲ್ಲಿ ವಾಸಿಸುವ ಜೀವರಾಶಿ ರಕ್ಷಿಸಲು ಭಾರತ ಸೇರಿದಂತೆ 200 ವಿಶ್ವಸಂಸ್ಥೆ ಸದಸ್ಯ ರಾಷ್ಟ್ರಗಳು ಐತಿಹಾಸಿಕ ಒಪ್ಪಂದ ಮಾಡಿಕೊಂಡಿವೆ. ಶೇ.60 ರಷ್ಟು ಭೂ ಮೇಲ್ಮೈ ಆವರಿಸಿರುವ, ಹವಾಮಾನವನ್ನು ನಿಯಂತ್ರಿಸುವ ಮತ್ತು ನಾವು ಉಸಿರಾಡುವ ಅರ್ಧದಷ್ಟು  ಆಮ್ಲ ಜನಕ  ಉತ್ಪಾದಿಸುವ ಎತ್ತರದ ಸಮುದ್ರಗಳನ್ನು ರಕ್ಷಿಸಲು ಇದು ಮೊದಲ ಅಂತಾರಾಷ್ಟ್ರೀಯ ಒಪ್ಪಂದವಾಗಿದೆ.

Advertisement
Advertisement

ಸಾಮಾನ್ಯವಾಗಿ ಎತ್ತರದ ಸಮುದ್ರಗಳು ದೇಶಗಳ ವಿಶೇಷ ಆರ್ಥಿಕ ವಲಯಗಳ ಗಡಿಯಲ್ಲಿ ಪ್ರಾರಂಭವಾಗುತ್ತವೆ ಮತ್ತು ಯಾವುದೇ ದೇಶದ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ.  2030 ರ ವೇಳೆಗೆ ಶೇ.30 ರಷ್ಟು ಎತ್ತರದ ಸಮುದ್ರಗಳ ‘ನೀರನ್ನು ಸಂರಕ್ಷಿಸಲು ಮತ್ತು ಮುಂದಿನ ಮಾತುಕತೆಗಳಿಗಾಗಿ ರಾಷ್ಟ್ರಗಳ ಸಮ್ಮೇಳನ ಆಯೋಜನೆಗೆ ನೆರವಾಗುವುದು ಈ ಒಪ್ಪಂದದ ಗುರಿಯಾಗಿದೆ. ಸಂರಕ್ಷಿತ ನೀರು ಎಂದರೆ ಮೀನುಗಾರಿಕೆ, ಹಡಗುಗಳ ಯಾವ ಮಾರ್ಗ ಬಳಸಬಹುದು ಮತ್ತು  ಆಳವಾದ ಸಮುದ್ರದ ಗಣಿಗಾರಿಕೆಯಂತಹ ಪರಿಶೋಧನಾ ಚಟುವಟಿಕೆಗಳ ಮೇಲೆ ನಿರ್ಬಂಧಗಳು ಇರುತ್ತವೆ.

2007ರಲ್ಲಿ ಆರಂಭವಾದ ಮಾತುಕತೆ ಕೊನೆಯ ಕ್ಷಣದವರೆಗೂ ಭಿನ್ನಾಭಿಪ್ರಾಯಗಳಿಂದ ಅಡ್ಡಿಯಾಗಿತ್ತು. ಸ್ಪಂಜುಗಳು, ಕ್ರಿಲ್, ಹವಳಗಳು, ಕಡಲಕಳೆಗಳು, ಬ್ಯಾಕ್ಟೀರಿಯಾ ಮತ್ತು ಖನಿಜಗಳಂತಹ ಆಳ ಸಮುದ್ರದಲ್ಲಿ ವ್ಯಾಪಕವಾಗಿ ಲಭ್ಯವಿರುವ ಸಮುದ್ರದ  ಸಂಪನ್ಮೂಲಗಳನ್ನು ಹೇಗೆ ಹಂಚಿಕೊಳ್ಳುವುದು ಎಂಬುದು ಒಂದು ಪ್ರಮುಖ ಎಡವಟ್ಟಾಗಿತ್ತು.

ಕೈಗಾರಿಕೀಕರಣಗೊಂಡ ರಾಷ್ಟ್ರಗಳು  ಔಷಧಗಳು, ಸೌಂದರ್ಯವರ್ಧಕಗಳು, ಎಲೆಕ್ಟ್ರಿಕ್ ವಾಹನ ಬ್ಯಾಟರಿಗಳ ತಯಾರಿಕೆ ಮತ್ತು ಇತರ ಕೈಗಾರಿಕಾ ಉದ್ದೇಶಗಳಿಗಾಗಿ ಈ ಸಂಪನ್ಮೂಲಗಳನ್ನು ಗುರಿ ಮಾಡಿಕೊಂಡಿದ್ದವು. ಈ ಒಪ್ಪಂದವು ಮೀನುಗಾರಿಕೆ, ಹಡಗು ಮತ್ತು ಸಂಶೋಧನೆಯ ಮೇಲೆ ಎಲ್ಲಾ ದೇಶಗಳಿಗೆ ಸಮಾನ ಹಕ್ಕುಗಳನ್ನು ನೀಡುತ್ತದೆ.

ಸಮುದ್ರದ ಕಾನೂನಿನ ಕುರಿತಾದ ಮೊದಲ ಯುಎನ್ ಸಮಾವೇಶದಲ್ಲಿಯೇ ಸುಮಾರು 40 ವರ್ಷಗಳ ಹಿಂದೆ ಸಹಿ ಹಾಕಲಾಗಿತ್ತು.  ಇದು ಹವಾಮಾನ ಬದಲಾವಣೆಯನ್ನು ನಿಭಾಯಿಸಲು ಪ್ರತಿ ದೇಶವು ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿರುವ  ಸನ್ನಿವೇಶವನ್ನು ಪರಿಹರಿಸಲಿಲ್ಲ ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷನ್ ಟೆಕ್ನಾಲಜಿಯ ನಿರ್ದೇಶಕ ಜಿ ಎ ರಾಮದಾಸ್ ಹೇಳಿದರು. .

ಭಾರತೀಯ ನಿಯೋಗ:  ಈ ಒಪ್ಪಂದ ವೇಳೆ  ಸೆಂಟರ್ ಫಾರ್ ಮೆರೈನ್ ಲಿವಿಂಗ್ ರಿಸೋರ್ಸಸ್ ಅಂಡ್ ಇಕಾಲಜಿಯ ನಿಯೋಗವು ಭಾರತವನ್ನು ಪ್ರತಿನಿಧಿಸಿದೆ ಎಂದು ಅದರ ನಿರ್ದೇಶಕ ಡಾ ಜಿ ವಿ ಎಂ ಗುಪ್ತಾ ಈ ಪತ್ರಿಕೆಗೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

15 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

15 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago