ನಿನ್ನ ಋಣವ ನಾ ಹೇಗೆ ತೀರಿಸಲಿ?

December 6, 2022
10:14 PM

ನವ ಮಾಸ ಗರ್ಭದಲಿ ಹೊತ್ತು ಸಹಿಸಲಾರದ ನೋವನುಂಡು ಸಾವಿನ ಜೊತೆ ಹೋರಾಟ ಮಾಡಿ ಜನ್ಮ ನೀಡಿ ನನಗೆ ನೀ ತಾಯಿಯಾದೆ ನಿನ್ನ ಋಣವ ನಾ ಹೇಗೆ ತೀರಿಸಲಿ?

Advertisement

ನಿದ್ದೆಯಿಲ್ಲದ ರಾತ್ರಿಗಳನು ಬೇಸರಿಸದೇ ನೀ ಕಳೆದೆ ನಿನ್ನ ಆರೋಗ್ಯವ ಗಮನಿಸದೆ ನನ್ನ  ನೀ ಜೋಪಾನ ಮಾಡಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ? ನೀ ನನ್ನ ಸಾಕಿ ಸಲಹಿದೆ ನನಗೆ ನೀ ವಿದ್ಯೆ ನೀಡಿ ಬೆಳೆಸಿದೆ ನೀ  ನನ್ನ  ಬೆನ್ನೆಲುಬಾಗಿ ಇದ್ದೆ ನನ್ನ ಒಳಿತಿಗಾಗಿ ನೀ ಪ್ರಾರ್ಥಿಸಿದೆ ನಿನ್ನ ಋಣವ ನಾ ಹೇಗೆ ತೀರಿಸಲಿ ?

ನನಗಾಗಿ ನಿನ್ನ ಸುಖವ ತ್ಯಾಗ ಮಾಡಿದೆ ನಿನ್ನ ಕನಸುಗಳ ಮುಚ್ಚಿಟ್ಟು ನೀ- ನನ್ನ ಕನಸುಗಳ ನನಸಾಗಿಸಿದೆ ನಿನ್ನ ಬದುಕನ್ನು ನನಗಾಗಿ ಸವೆಸಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ?

ನಿನ್ನ ಮುಪ್ಪಿನಲಿ ನೀ ಮಗುವಿನಂತಾದಾಗ ನಿನಗೆ ನಾನು ತಾಯಿಯಾಗುವೆ ಎಳವೆಯಲ್ಲಿ ನಾನು ಮಾಡಿದ ಹಾಗೆ  ಮುಪ್ಪಿನಲಿ    ನೀನು ಮಾಡಿದರೆ ತಾಯಿಯಂತೆ  ನಿನ್ನಾಟ ಆನಂದಿಸುವೆ. ನೀ ನನಗೆ ತೋರಿದ ಮಮತೆಯದೆಷ್ಟು ನೀ ನನಗೆ ಮಾಡಿದ ಸೇವೆಯದೆಷ್ಟು ಬಾಯ್ತುಂಬ “ಅಮ್ಮಾ” ಎಂದರೆ ಸಂದೀತೇ ನಿನ್ನ ಋಣ ಸ್ವಲ್ಪವಾದರೂ!!!! ನಿನ್ನ ಋಣವ ನಾ ಹೇಗೆ ತೀರಿಸಲಿ?

ಒಂದು ಜನ್ಮದಲಿ ತೀರಿಸಲು ಸಾಧ್ಯವೇ ತಾಯಿಯ ತ್ಯಾಗದ ಋಣವದನು? ನನ್ನ ಗರ್ಭದಲಿ ಮುಂದೆ ನೀ ಹುಟ್ಟಿ ಬಾ ನಿನಗೆ ಜನ್ಮ ನೀಡಿ ನಾ ತಾಯಿಯಾಗುವೆ ಹೀಗೆ ತೀರಿಸುವೆ ನಾ ನಿನ್ನ ಋಣವದನು.

 

ಬರಹ :
ರೇಣುಕಾ ಸುಧೀರ್,                   ಅರಸಿನಮಕ್ಕಿ
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮೈಸೂರಿನಲ್ಲಿ ಸೆ. 22 ರಿಂದ ಅಕ್ಟೋಬರ್ 1 ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ
September 20, 2025
7:08 AM
by: The Rural Mirror ಸುದ್ದಿಜಾಲ
ಮಾಗುವುದು ಸಾಧನೆ ಬೀಗುವುದು ಸುಮ್ಮನೆ
September 16, 2025
7:14 AM
by: ದ ರೂರಲ್ ಮಿರರ್.ಕಾಂ
ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
August 8, 2025
6:37 AM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror