Advertisement
ಸಾಹಿತ್ಯ

ಹಳ್ಳಿಯತ್ತ ಸಾಹಿತ್ಯದ ಚಿತ್ತ | ಬಂಟ್ವಾಳದಲ್ಲಿ ವಿನೂತನ ಸಾಹಿತ್ಯ ಕಾರ್ಯಕ್ರಮ |

Share

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಮತ್ತು ಚಿಗುರೆಲೆ ಸಾಹಿತ್ಯ ಬಳಗ ವತಿಯಿಂದ ನೆಟ್ಲ ಮುಡ್ನೂರು ಗ್ರಾ.ಪಂ. ಸಹಯೋಗದಲ್ಲಿ `ಹಳ್ಳಿಯತ್ತ ಸಾಹಿತ್ಯದ ಚಿತ್ತ’ ಕಾರ್ಯಕ್ರಮ ಪಂಚಾಯತ್‌ನ ನೇರಳಕಟ್ಟೆ ಸಭಾಭವನದಲ್ಲಿ  ನಡೆಯಿತು.

Advertisement
Advertisement
Advertisement
Advertisement

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾ. ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಉದ್ಘಾಟಿಸಿದರು . ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ ಮಾತನಾಡಿ ಸಾಹಿತ್ಯ ಕ್ಷೇತ್ರದಲ್ಲಿ ಯುವಜನತೆ ತೊಡಗಿಸಿಕೊಳ್ಳಬೇಕು. ಸಾಹಿತಿಯೊಬ್ಬ ಉತ್ತಮ ಸಮಾಜ ನಿರ್ಮಾಣ ಮಾಡುತ್ತಾನೆ, ಹಾಗಾಗಿ ಚಿಗುರೆಲೆ ಸಾಹಿತ್ಯ ಬಳಗದ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನ ಶ್ಲಾಘನೀಯ ಎಂದರು.

Advertisement

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಗೌರವ ಕಾರ್ಯದರ್ಶಿ ವಿ. ಸುಬ್ರಹ್ಮಣ್ಯ ಭಟ್ ಮಾತನಾಡಿ ಸಾಹಿತ್ಯದ ಚಿತ್ತ ಹಳ್ಳಿಯತ್ತ ಹೋದರೆ ಹೆಚ್ಚು ಸಾಹಿತ್ಯ ಕೃಷಿ ಬೆಳೆಯುತ್ತವೆ. ಮಕ್ಕಳಲ್ಲಿ ಸಾಹಿತ್ಯದ ಜಾಗೃತಿ ಮೂಡಿಸಲು ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು.

ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಮಾಹಿತಿ, ಶಿಕ್ಷಣ ಮತ್ತು ಸಂವಹನ ಸಂಯೋಜಕ ಡೊಂಬಯ್ಯ ಇಡ್ಕಿದು ಮಾತನಾಡಿ, ಕವಿತೆಗೆ ನಿಖರವಾದ ವಿವರಣೆಯೊಂದು ಇರುವುದಿಲ್ಲ. ಕವನದಲ್ಲಿ ರೂಪಕಗಳ ಮೇಲೆ ರೂಪಕಗಳನ್ನು ತಂದರೆ ಅದೂ ಬಹಳ ಕೃತಕವಾಗಿ ಅನಿಸುತ್ತದೆ ಎಂದು ಅವರು ಹೇಳಿದರು.

Advertisement

ನೆಟ್ಲಮುಡ್ನೂರು ಗ್ರಾ.ಪಂ ಅಧ್ಯಕ್ಷ ಸಚ್ಚಿದಾನಂದ , ಚಲನಚಿತ್ರ ನಟಿ ವಸಂತಲಕ್ಷ್ಮೀ ಪುತ್ತೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾರಂಭದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯ ಪೂವಪ್ಪ ನೇರಳಕಟ್ಟೆ, ಕ.ಸಾ.ಪ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ವಿಟ್ಲ ಹೋಬಳಿ ಕಸಾಪ ಅಧ್ಯಕ್ಷ, ಪತ್ರಕರ್ತ ಗಣೇಶ ಪ್ರಸಾದ ಪಾಂಡೇಲು ಭಾಗವಹಿಸಿದ್ದರು.

Advertisement

ಕವಿಗೋಷ್ಠಿಯಲ್ಲಿ ತುಳಸಿ ಕೈರಂಗಳ, ಗ್ರೀಷ್ಮಾ, ಧೃತಿ ಏಮಾಜೆ, ಕೌಶೀಲ, ಫಾತಿಮತ್ ಶಿಫಾನಾ, ಮಾನಸ ವಿಜಯ್ ಕೈತಂಜೆ, ಗೋಪಾಲಕೃಷ್ಣ ನೇರಳಕಟ್ಟೆ, ಅಶೋಕ್ ಎನ್. ಕಡೆಶಿವಾಲಯ, ಆನಂದ ರೈ ಅಡ್ಕಸ್ಥಳ, ಅನ್ನಪೂರ್ಣ ಎನ್.ಕೆ, ಹರೀಶ್ ಮಂಜೊಟ್ಟಿ, ಇಬ್ರಾಹಿಂ ಖಲೀಲ್, ರಾಧಾಕೃಷ್ಣ ಎರುಂಬು , ನಿನಾದ್ ಕೈರಂಗಳ, ರಮ್ಮ ಎಂ. ಶ್ರೀನಿವಾಸ್, ಆತ್ಮಿಕಾ, ಲೇಖನಾ,ಪ್ರಗತಿ, ದೀಪ್ತಿ ಅಡ್ಡಂತ್ತಡ್ಕ, ನವ್ಯಶ್ರೀ ಸ್ವರ್ಗ, ಪ್ರಜ್ಞಾ ಕುಲಾಲ್ ಕಾವು, ಸುಪ್ರೀತಾ ಚರಣ್ ಪಾಲಪ್ಪೆ, ಚಂದ್ರಮೌಳಿ ಕಡಂದೇಲು, ಮಂಜುನಾಥ ಎನ್. ಪುತ್ತೂರು, ನಿಭಾ ಬಟ್ಲಡ್ಕ, ವಿಂಧ್ಯಾ ಎಸ್. ರೈ, ಕಾವ್ಯಶ್ರೀ ಅಳಿಕೆ, ಸಾರ್ಥಕ್. ಟಿ., ಬಮಿತ.ಎಂ. ಹೆಚ್., ರಹಾನ ಎಂ., ಅಪೂರ್ವ ಕಾರಂತ್, ಮುಸ್ತಫಾ ಬೆಳ್ಳಾರೆ, ಹರಿಣಾಕ್ಷಿ ನೇರಳಕಟ್ಟೆ, ಶಶಿಧರ್ ಏಮಾಜೆ, ನಾರಾಯಣ ಕುಂಬ್ರ ಸ್ವರಚಿತ ಕವನ ವಾಚಿಸಿದರು.

ಶಶಿಧರ್ ಏಮಾಜೆ ಪ್ರಸ್ತಾವನೆಗೈದರು. ಸುಪ್ರೀತಾ ಚರಣ್ ಪಾಲಪ್ಪೆ ಪ್ರಾರ್ಥಿಸಿದರು, ಚಿಗುರೆಲೆ ಸಾಹಿತ್ಯ ಬಳಗದ ನಾರಾಯಣ ಕುಂಬ್ರ ಸ್ವಾಗತಿಸಿ, ದೀಪ್ತಿ ಅಡ್ಡಂತ್ತಡ್ಕ ವಂದಿಸಿದರು. ತುಳಸಿ ಕೈರಂಗಳ ಸಭಾ ಕಾರ್ಯಕ್ರಮ ನಿರೂಪಿಸಿದರು. ರಾಧಾಕೃಷ್ಣ ಎರುಂಬು ಹಾಗೂ ಅನ್ನಪೂರ್ಣ ಎನ್.ಕೆ ಕಾರ್ಯಕ್ರಮ ನಿರ್ವಹಿಸಿದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

24 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

1 day ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

1 day ago