Advertisement
ಸಾಹಿತ್ಯ

ನಿನ್ನ ಋಣವ ನಾ ಹೇಗೆ ತೀರಿಸಲಿ?

Share

ನವ ಮಾಸ ಗರ್ಭದಲಿ ಹೊತ್ತು ಸಹಿಸಲಾರದ ನೋವನುಂಡು ಸಾವಿನ ಜೊತೆ ಹೋರಾಟ ಮಾಡಿ ಜನ್ಮ ನೀಡಿ ನನಗೆ ನೀ ತಾಯಿಯಾದೆ ನಿನ್ನ ಋಣವ ನಾ ಹೇಗೆ ತೀರಿಸಲಿ?
Advertisement

ನಿದ್ದೆಯಿಲ್ಲದ ರಾತ್ರಿಗಳನು ಬೇಸರಿಸದೇ ನೀ ಕಳೆದೆ ನಿನ್ನ ಆರೋಗ್ಯವ ಗಮನಿಸದೆ ನನ್ನ  ನೀ ಜೋಪಾನ ಮಾಡಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ? ನೀ ನನ್ನ ಸಾಕಿ ಸಲಹಿದೆ ನನಗೆ ನೀ ವಿದ್ಯೆ ನೀಡಿ ಬೆಳೆಸಿದೆ ನೀ  ನನ್ನ  ಬೆನ್ನೆಲುಬಾಗಿ ಇದ್ದೆ ನನ್ನ ಒಳಿತಿಗಾಗಿ ನೀ ಪ್ರಾರ್ಥಿಸಿದೆ ನಿನ್ನ ಋಣವ ನಾ ಹೇಗೆ ತೀರಿಸಲಿ ?

ನನಗಾಗಿ ನಿನ್ನ ಸುಖವ ತ್ಯಾಗ ಮಾಡಿದೆ ನಿನ್ನ ಕನಸುಗಳ ಮುಚ್ಚಿಟ್ಟು ನೀ- ನನ್ನ ಕನಸುಗಳ ನನಸಾಗಿಸಿದೆ ನಿನ್ನ ಬದುಕನ್ನು ನನಗಾಗಿ ಸವೆಸಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ?

ನಿನ್ನ ಮುಪ್ಪಿನಲಿ ನೀ ಮಗುವಿನಂತಾದಾಗ ನಿನಗೆ ನಾನು ತಾಯಿಯಾಗುವೆ ಎಳವೆಯಲ್ಲಿ ನಾನು ಮಾಡಿದ ಹಾಗೆ  ಮುಪ್ಪಿನಲಿ    ನೀನು ಮಾಡಿದರೆ ತಾಯಿಯಂತೆ  ನಿನ್ನಾಟ ಆನಂದಿಸುವೆ. ನೀ ನನಗೆ ತೋರಿದ ಮಮತೆಯದೆಷ್ಟು ನೀ ನನಗೆ ಮಾಡಿದ ಸೇವೆಯದೆಷ್ಟು ಬಾಯ್ತುಂಬ “ಅಮ್ಮಾ” ಎಂದರೆ ಸಂದೀತೇ ನಿನ್ನ ಋಣ ಸ್ವಲ್ಪವಾದರೂ!!!! ನಿನ್ನ ಋಣವ ನಾ ಹೇಗೆ ತೀರಿಸಲಿ?

ಒಂದು ಜನ್ಮದಲಿ ತೀರಿಸಲು ಸಾಧ್ಯವೇ ತಾಯಿಯ ತ್ಯಾಗದ ಋಣವದನು? ನನ್ನ ಗರ್ಭದಲಿ ಮುಂದೆ ನೀ ಹುಟ್ಟಿ ಬಾ ನಿನಗೆ ಜನ್ಮ ನೀಡಿ ನಾ ತಾಯಿಯಾಗುವೆ ಹೀಗೆ ತೀರಿಸುವೆ ನಾ ನಿನ್ನ ಋಣವದನು.

 

ಬರಹ :
ರೇಣುಕಾ ಸುಧೀರ್,                   ಅರಸಿನಮಕ್ಕಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

3 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

3 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

16 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

22 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago