Advertisement
ಸಾಹಿತ್ಯ

ನಿನ್ನ ಋಣವ ನಾ ಹೇಗೆ ತೀರಿಸಲಿ?

Share

ನವ ಮಾಸ ಗರ್ಭದಲಿ ಹೊತ್ತು ಸಹಿಸಲಾರದ ನೋವನುಂಡು ಸಾವಿನ ಜೊತೆ ಹೋರಾಟ ಮಾಡಿ ಜನ್ಮ ನೀಡಿ ನನಗೆ ನೀ ತಾಯಿಯಾದೆ ನಿನ್ನ ಋಣವ ನಾ ಹೇಗೆ ತೀರಿಸಲಿ?

ನಿದ್ದೆಯಿಲ್ಲದ ರಾತ್ರಿಗಳನು ಬೇಸರಿಸದೇ ನೀ ಕಳೆದೆ ನಿನ್ನ ಆರೋಗ್ಯವ ಗಮನಿಸದೆ ನನ್ನ  ನೀ ಜೋಪಾನ ಮಾಡಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ? ನೀ ನನ್ನ ಸಾಕಿ ಸಲಹಿದೆ ನನಗೆ ನೀ ವಿದ್ಯೆ ನೀಡಿ ಬೆಳೆಸಿದೆ ನೀ  ನನ್ನ  ಬೆನ್ನೆಲುಬಾಗಿ ಇದ್ದೆ ನನ್ನ ಒಳಿತಿಗಾಗಿ ನೀ ಪ್ರಾರ್ಥಿಸಿದೆ ನಿನ್ನ ಋಣವ ನಾ ಹೇಗೆ ತೀರಿಸಲಿ ?

ನನಗಾಗಿ ನಿನ್ನ ಸುಖವ ತ್ಯಾಗ ಮಾಡಿದೆ ನಿನ್ನ ಕನಸುಗಳ ಮುಚ್ಚಿಟ್ಟು ನೀ- ನನ್ನ ಕನಸುಗಳ ನನಸಾಗಿಸಿದೆ ನಿನ್ನ ಬದುಕನ್ನು ನನಗಾಗಿ ಸವೆಸಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ?

ನಿನ್ನ ಮುಪ್ಪಿನಲಿ ನೀ ಮಗುವಿನಂತಾದಾಗ ನಿನಗೆ ನಾನು ತಾಯಿಯಾಗುವೆ ಎಳವೆಯಲ್ಲಿ ನಾನು ಮಾಡಿದ ಹಾಗೆ  ಮುಪ್ಪಿನಲಿ    ನೀನು ಮಾಡಿದರೆ ತಾಯಿಯಂತೆ  ನಿನ್ನಾಟ ಆನಂದಿಸುವೆ. ನೀ ನನಗೆ ತೋರಿದ ಮಮತೆಯದೆಷ್ಟು ನೀ ನನಗೆ ಮಾಡಿದ ಸೇವೆಯದೆಷ್ಟು ಬಾಯ್ತುಂಬ “ಅಮ್ಮಾ” ಎಂದರೆ ಸಂದೀತೇ ನಿನ್ನ ಋಣ ಸ್ವಲ್ಪವಾದರೂ!!!! ನಿನ್ನ ಋಣವ ನಾ ಹೇಗೆ ತೀರಿಸಲಿ?

ಒಂದು ಜನ್ಮದಲಿ ತೀರಿಸಲು ಸಾಧ್ಯವೇ ತಾಯಿಯ ತ್ಯಾಗದ ಋಣವದನು? ನನ್ನ ಗರ್ಭದಲಿ ಮುಂದೆ ನೀ ಹುಟ್ಟಿ ಬಾ ನಿನಗೆ ಜನ್ಮ ನೀಡಿ ನಾ ತಾಯಿಯಾಗುವೆ ಹೀಗೆ ತೀರಿಸುವೆ ನಾ ನಿನ್ನ ಋಣವದನು.

 

ಬರಹ :
ರೇಣುಕಾ ಸುಧೀರ್,                   ಅರಸಿನಮಕ್ಕಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

7 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

11 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago