Advertisement
ಸಾಹಿತ್ಯ

ನಿನ್ನ ಋಣವ ನಾ ಹೇಗೆ ತೀರಿಸಲಿ?

Share

ನವ ಮಾಸ ಗರ್ಭದಲಿ ಹೊತ್ತು ಸಹಿಸಲಾರದ ನೋವನುಂಡು ಸಾವಿನ ಜೊತೆ ಹೋರಾಟ ಮಾಡಿ ಜನ್ಮ ನೀಡಿ ನನಗೆ ನೀ ತಾಯಿಯಾದೆ ನಿನ್ನ ಋಣವ ನಾ ಹೇಗೆ ತೀರಿಸಲಿ?

ನಿದ್ದೆಯಿಲ್ಲದ ರಾತ್ರಿಗಳನು ಬೇಸರಿಸದೇ ನೀ ಕಳೆದೆ ನಿನ್ನ ಆರೋಗ್ಯವ ಗಮನಿಸದೆ ನನ್ನ  ನೀ ಜೋಪಾನ ಮಾಡಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ? ನೀ ನನ್ನ ಸಾಕಿ ಸಲಹಿದೆ ನನಗೆ ನೀ ವಿದ್ಯೆ ನೀಡಿ ಬೆಳೆಸಿದೆ ನೀ  ನನ್ನ  ಬೆನ್ನೆಲುಬಾಗಿ ಇದ್ದೆ ನನ್ನ ಒಳಿತಿಗಾಗಿ ನೀ ಪ್ರಾರ್ಥಿಸಿದೆ ನಿನ್ನ ಋಣವ ನಾ ಹೇಗೆ ತೀರಿಸಲಿ ?

ನನಗಾಗಿ ನಿನ್ನ ಸುಖವ ತ್ಯಾಗ ಮಾಡಿದೆ ನಿನ್ನ ಕನಸುಗಳ ಮುಚ್ಚಿಟ್ಟು ನೀ- ನನ್ನ ಕನಸುಗಳ ನನಸಾಗಿಸಿದೆ ನಿನ್ನ ಬದುಕನ್ನು ನನಗಾಗಿ ಸವೆಸಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ?

ನಿನ್ನ ಮುಪ್ಪಿನಲಿ ನೀ ಮಗುವಿನಂತಾದಾಗ ನಿನಗೆ ನಾನು ತಾಯಿಯಾಗುವೆ ಎಳವೆಯಲ್ಲಿ ನಾನು ಮಾಡಿದ ಹಾಗೆ  ಮುಪ್ಪಿನಲಿ    ನೀನು ಮಾಡಿದರೆ ತಾಯಿಯಂತೆ  ನಿನ್ನಾಟ ಆನಂದಿಸುವೆ. ನೀ ನನಗೆ ತೋರಿದ ಮಮತೆಯದೆಷ್ಟು ನೀ ನನಗೆ ಮಾಡಿದ ಸೇವೆಯದೆಷ್ಟು ಬಾಯ್ತುಂಬ “ಅಮ್ಮಾ” ಎಂದರೆ ಸಂದೀತೇ ನಿನ್ನ ಋಣ ಸ್ವಲ್ಪವಾದರೂ!!!! ನಿನ್ನ ಋಣವ ನಾ ಹೇಗೆ ತೀರಿಸಲಿ?

ಒಂದು ಜನ್ಮದಲಿ ತೀರಿಸಲು ಸಾಧ್ಯವೇ ತಾಯಿಯ ತ್ಯಾಗದ ಋಣವದನು? ನನ್ನ ಗರ್ಭದಲಿ ಮುಂದೆ ನೀ ಹುಟ್ಟಿ ಬಾ ನಿನಗೆ ಜನ್ಮ ನೀಡಿ ನಾ ತಾಯಿಯಾಗುವೆ ಹೀಗೆ ತೀರಿಸುವೆ ನಾ ನಿನ್ನ ಋಣವದನು.

 

ಬರಹ :
ರೇಣುಕಾ ಸುಧೀರ್,                   ಅರಸಿನಮಕ್ಕಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

11 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

12 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

19 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

23 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 days ago