(ಚಿತ್ರ- ಇಂಟರ್ನೆಟ್ )
ನಿದ್ದೆಯಿಲ್ಲದ ರಾತ್ರಿಗಳನು ಬೇಸರಿಸದೇ ನೀ ಕಳೆದೆ ನಿನ್ನ ಆರೋಗ್ಯವ ಗಮನಿಸದೆ ನನ್ನ ನೀ ಜೋಪಾನ ಮಾಡಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ? ನೀ ನನ್ನ ಸಾಕಿ ಸಲಹಿದೆ ನನಗೆ ನೀ ವಿದ್ಯೆ ನೀಡಿ ಬೆಳೆಸಿದೆ ನೀ ನನ್ನ ಬೆನ್ನೆಲುಬಾಗಿ ಇದ್ದೆ ನನ್ನ ಒಳಿತಿಗಾಗಿ ನೀ ಪ್ರಾರ್ಥಿಸಿದೆ ನಿನ್ನ ಋಣವ ನಾ ಹೇಗೆ ತೀರಿಸಲಿ ?
ನನಗಾಗಿ ನಿನ್ನ ಸುಖವ ತ್ಯಾಗ ಮಾಡಿದೆ ನಿನ್ನ ಕನಸುಗಳ ಮುಚ್ಚಿಟ್ಟು ನೀ- ನನ್ನ ಕನಸುಗಳ ನನಸಾಗಿಸಿದೆ ನಿನ್ನ ಬದುಕನ್ನು ನನಗಾಗಿ ಸವೆಸಿದೆ. ನಿನ್ನ ಋಣವ ನಾ ಹೇಗೆ ತೀರಿಸಲಿ?
ನಿನ್ನ ಮುಪ್ಪಿನಲಿ ನೀ ಮಗುವಿನಂತಾದಾಗ ನಿನಗೆ ನಾನು ತಾಯಿಯಾಗುವೆ ಎಳವೆಯಲ್ಲಿ ನಾನು ಮಾಡಿದ ಹಾಗೆ ಮುಪ್ಪಿನಲಿ ನೀನು ಮಾಡಿದರೆ ತಾಯಿಯಂತೆ ನಿನ್ನಾಟ ಆನಂದಿಸುವೆ. ನೀ ನನಗೆ ತೋರಿದ ಮಮತೆಯದೆಷ್ಟು ನೀ ನನಗೆ ಮಾಡಿದ ಸೇವೆಯದೆಷ್ಟು ಬಾಯ್ತುಂಬ “ಅಮ್ಮಾ” ಎಂದರೆ ಸಂದೀತೇ ನಿನ್ನ ಋಣ ಸ್ವಲ್ಪವಾದರೂ!!!! ನಿನ್ನ ಋಣವ ನಾ ಹೇಗೆ ತೀರಿಸಲಿ?
ಒಂದು ಜನ್ಮದಲಿ ತೀರಿಸಲು ಸಾಧ್ಯವೇ ತಾಯಿಯ ತ್ಯಾಗದ ಋಣವದನು? ನನ್ನ ಗರ್ಭದಲಿ ಮುಂದೆ ನೀ ಹುಟ್ಟಿ ಬಾ ನಿನಗೆ ಜನ್ಮ ನೀಡಿ ನಾ ತಾಯಿಯಾಗುವೆ ಹೀಗೆ ತೀರಿಸುವೆ ನಾ ನಿನ್ನ ಋಣವದನು.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…