“ಸಹ್ಯಾದ್ರಿ ಸಿಂಧೂರ” | ಶಿವಮೊಗ್ಗ ಕೃಷಿ ವಿವಿಯಿಂದ ಹೊಸ ಭತ್ತದ ತಳಿ

November 12, 2025
5:53 AM

ರೈತರಿಗೆ ಅಧಿಕ ಇಳುವರಿ ಹಾಗೂ ಮಧುಮೇಹಿಗಳಿಗೆ ಸಕ್ಕರೆ ಅಂಶ ಕಡಿಮೆ ಇರುವ ಭತ್ತದ ಹೊಸ ತಳಿಯಾದ ಕೆಂಪು ಭತ್ತವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ‘ಸಹ್ಯಾದ್ರಿ ಸಿಂಧೂರ’ ಎಂಬ ನೂತನ ಕೆಂಪು ಸಣ್ಣ ಭತ್ತವನ್ನು ಪರಿಚಯಿಸಿಕೊಟ್ಟಿದೆ.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕೃಷಿ ಮೇಳದಲ್ಲಿ ಸಹ್ಯಾದ್ರಿ ಸಿಂಧೂರ ತಳಿಯ ಭತ್ತವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದ್ದಾರೆ. ಈಗಾಗಲೇ ಅನೇಕ ಕೆಂಪು ತಳಿಯ ಭತ್ತಗಳಿವೆ. ಆದರೆ, ಈ ಸಹ್ಯಾದ್ರಿ ಸಿಂಧೂರ ತಳಿಯ ಅಕ್ಕಿಯು ಇತರ ಕೆಂಪು ತಳಿಯ ಭತ್ತಕ್ಕಿಂತ ವಿಭಿನ್ನವಾಗಿದೆ. ಇದು ಸಣ್ಣ ಕೆಂಪು ಭತ್ತವಾಗಿದ್ದು, ಇದನ್ನು ಎಲ್ಲರೂ ಸಹ ಊಟಕ್ಕೆ ಬಳಸಬಹುದು.
ಈ ಭತ್ತವನ್ನು ರಾಜ್ಯಾದ್ಯಂತ 40 ಕೇಂದ್ರಗಳಲ್ಲಿ ಪ್ರಯೋಗಿಸಲಾಗಿದ್ದು, ಅತ್ಯಂತ ಯಶಸ್ವಿಯಾಗಿ ಇಳುವರಿ ಬಂದಿದೆ. ಇದು ಒಂದು ಹೆಕ್ಟೇರ್‍ಗೆ 55 ಕ್ವಿಂಟಾಲ್ ಬರುತ್ತದೆ. ಮಲೆನಾಡಿನಲ್ಲಿ ಒಂದು ಹೆಕ್ಟೇರ್ ಗೆ 22 ಕ್ವಿಂಟಾಲ್ ಇಳುವರಿ ಸಿಗುತ್ತದೆ.ಇದರ ಇನ್ನೊಂದು ವಿಶೇಷತೆಯೆಂದರೆ,ಇದು 120 ದಿನದಲ್ಲೇ ಕಟಾವಿಗೆ ಬರುತ್ತದೆ. ಅಲ್ಲದೆ, ಎರಡು ಬೆಳೆಗಳಾಗಿ ಬೆಳೆಯಬಹುದು. ಇದಕ್ಕೆ ಯಾವುದೇ ರೋಗಭಾಧೆಯು ಬಹುಬೇಗ ತಗಲುವುದಿಲ್ಲ. ಇದರಲ್ಲಿ ಕೀಟವೂ ಇರುವುದಿಲ್ಲ. ಪ್ರೋಟೀನ್, ಐರನ್ ಜಿಂಕ್ ಅಂಶವನ್ನು ಹೆಚ್ಚಾಗಿ ಹೊಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror