Advertisement
ಕೃಷಿ

“ಸಹ್ಯಾದ್ರಿ ಸಿಂಧೂರ” | ಶಿವಮೊಗ್ಗ ಕೃಷಿ ವಿವಿಯಿಂದ ಹೊಸ ಭತ್ತದ ತಳಿ

Share

ರೈತರಿಗೆ ಅಧಿಕ ಇಳುವರಿ ಹಾಗೂ ಮಧುಮೇಹಿಗಳಿಗೆ ಸಕ್ಕರೆ ಅಂಶ ಕಡಿಮೆ ಇರುವ ಭತ್ತದ ಹೊಸ ತಳಿಯಾದ ಕೆಂಪು ಭತ್ತವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ‘ಸಹ್ಯಾದ್ರಿ ಸಿಂಧೂರ’ ಎಂಬ ನೂತನ ಕೆಂಪು ಸಣ್ಣ ಭತ್ತವನ್ನು ಪರಿಚಯಿಸಿಕೊಟ್ಟಿದೆ.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕೃಷಿ ಮೇಳದಲ್ಲಿ ಸಹ್ಯಾದ್ರಿ ಸಿಂಧೂರ ತಳಿಯ ಭತ್ತವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದ್ದಾರೆ. ಈಗಾಗಲೇ ಅನೇಕ ಕೆಂಪು ತಳಿಯ ಭತ್ತಗಳಿವೆ. ಆದರೆ, ಈ ಸಹ್ಯಾದ್ರಿ ಸಿಂಧೂರ ತಳಿಯ ಅಕ್ಕಿಯು ಇತರ ಕೆಂಪು ತಳಿಯ ಭತ್ತಕ್ಕಿಂತ ವಿಭಿನ್ನವಾಗಿದೆ. ಇದು ಸಣ್ಣ ಕೆಂಪು ಭತ್ತವಾಗಿದ್ದು, ಇದನ್ನು ಎಲ್ಲರೂ ಸಹ ಊಟಕ್ಕೆ ಬಳಸಬಹುದು.
ಈ ಭತ್ತವನ್ನು ರಾಜ್ಯಾದ್ಯಂತ 40 ಕೇಂದ್ರಗಳಲ್ಲಿ ಪ್ರಯೋಗಿಸಲಾಗಿದ್ದು, ಅತ್ಯಂತ ಯಶಸ್ವಿಯಾಗಿ ಇಳುವರಿ ಬಂದಿದೆ. ಇದು ಒಂದು ಹೆಕ್ಟೇರ್‍ಗೆ 55 ಕ್ವಿಂಟಾಲ್ ಬರುತ್ತದೆ. ಮಲೆನಾಡಿನಲ್ಲಿ ಒಂದು ಹೆಕ್ಟೇರ್ ಗೆ 22 ಕ್ವಿಂಟಾಲ್ ಇಳುವರಿ ಸಿಗುತ್ತದೆ.ಇದರ ಇನ್ನೊಂದು ವಿಶೇಷತೆಯೆಂದರೆ,ಇದು 120 ದಿನದಲ್ಲೇ ಕಟಾವಿಗೆ ಬರುತ್ತದೆ. ಅಲ್ಲದೆ, ಎರಡು ಬೆಳೆಗಳಾಗಿ ಬೆಳೆಯಬಹುದು. ಇದಕ್ಕೆ ಯಾವುದೇ ರೋಗಭಾಧೆಯು ಬಹುಬೇಗ ತಗಲುವುದಿಲ್ಲ. ಇದರಲ್ಲಿ ಕೀಟವೂ ಇರುವುದಿಲ್ಲ. ಪ್ರೋಟೀನ್, ಐರನ್ ಜಿಂಕ್ ಅಂಶವನ್ನು ಹೆಚ್ಚಾಗಿ ಹೊಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

8 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

8 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

8 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

9 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

9 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

9 hours ago