Advertisement
ಕೃಷಿ

“ಸಹ್ಯಾದ್ರಿ ಸಿಂಧೂರ” | ಶಿವಮೊಗ್ಗ ಕೃಷಿ ವಿವಿಯಿಂದ ಹೊಸ ಭತ್ತದ ತಳಿ

Share

ರೈತರಿಗೆ ಅಧಿಕ ಇಳುವರಿ ಹಾಗೂ ಮಧುಮೇಹಿಗಳಿಗೆ ಸಕ್ಕರೆ ಅಂಶ ಕಡಿಮೆ ಇರುವ ಭತ್ತದ ಹೊಸ ತಳಿಯಾದ ಕೆಂಪು ಭತ್ತವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ‘ಸಹ್ಯಾದ್ರಿ ಸಿಂಧೂರ’ ಎಂಬ ನೂತನ ಕೆಂಪು ಸಣ್ಣ ಭತ್ತವನ್ನು ಪರಿಚಯಿಸಿಕೊಟ್ಟಿದೆ.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕೃಷಿ ಮೇಳದಲ್ಲಿ ಸಹ್ಯಾದ್ರಿ ಸಿಂಧೂರ ತಳಿಯ ಭತ್ತವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದ್ದಾರೆ. ಈಗಾಗಲೇ ಅನೇಕ ಕೆಂಪು ತಳಿಯ ಭತ್ತಗಳಿವೆ. ಆದರೆ, ಈ ಸಹ್ಯಾದ್ರಿ ಸಿಂಧೂರ ತಳಿಯ ಅಕ್ಕಿಯು ಇತರ ಕೆಂಪು ತಳಿಯ ಭತ್ತಕ್ಕಿಂತ ವಿಭಿನ್ನವಾಗಿದೆ. ಇದು ಸಣ್ಣ ಕೆಂಪು ಭತ್ತವಾಗಿದ್ದು, ಇದನ್ನು ಎಲ್ಲರೂ ಸಹ ಊಟಕ್ಕೆ ಬಳಸಬಹುದು.
ಈ ಭತ್ತವನ್ನು ರಾಜ್ಯಾದ್ಯಂತ 40 ಕೇಂದ್ರಗಳಲ್ಲಿ ಪ್ರಯೋಗಿಸಲಾಗಿದ್ದು, ಅತ್ಯಂತ ಯಶಸ್ವಿಯಾಗಿ ಇಳುವರಿ ಬಂದಿದೆ. ಇದು ಒಂದು ಹೆಕ್ಟೇರ್‍ಗೆ 55 ಕ್ವಿಂಟಾಲ್ ಬರುತ್ತದೆ. ಮಲೆನಾಡಿನಲ್ಲಿ ಒಂದು ಹೆಕ್ಟೇರ್ ಗೆ 22 ಕ್ವಿಂಟಾಲ್ ಇಳುವರಿ ಸಿಗುತ್ತದೆ.ಇದರ ಇನ್ನೊಂದು ವಿಶೇಷತೆಯೆಂದರೆ,ಇದು 120 ದಿನದಲ್ಲೇ ಕಟಾವಿಗೆ ಬರುತ್ತದೆ. ಅಲ್ಲದೆ, ಎರಡು ಬೆಳೆಗಳಾಗಿ ಬೆಳೆಯಬಹುದು. ಇದಕ್ಕೆ ಯಾವುದೇ ರೋಗಭಾಧೆಯು ಬಹುಬೇಗ ತಗಲುವುದಿಲ್ಲ. ಇದರಲ್ಲಿ ಕೀಟವೂ ಇರುವುದಿಲ್ಲ. ಪ್ರೋಟೀನ್, ಐರನ್ ಜಿಂಕ್ ಅಂಶವನ್ನು ಹೆಚ್ಚಾಗಿ ಹೊಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

7 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

12 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

17 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago