Advertisement
ಕೃಷಿ

“ಸಹ್ಯಾದ್ರಿ ಸಿಂಧೂರ” | ಶಿವಮೊಗ್ಗ ಕೃಷಿ ವಿವಿಯಿಂದ ಹೊಸ ಭತ್ತದ ತಳಿ

Share

ರೈತರಿಗೆ ಅಧಿಕ ಇಳುವರಿ ಹಾಗೂ ಮಧುಮೇಹಿಗಳಿಗೆ ಸಕ್ಕರೆ ಅಂಶ ಕಡಿಮೆ ಇರುವ ಭತ್ತದ ಹೊಸ ತಳಿಯಾದ ಕೆಂಪು ಭತ್ತವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ‘ಸಹ್ಯಾದ್ರಿ ಸಿಂಧೂರ’ ಎಂಬ ನೂತನ ಕೆಂಪು ಸಣ್ಣ ಭತ್ತವನ್ನು ಪರಿಚಯಿಸಿಕೊಟ್ಟಿದೆ.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕೃಷಿ ಮೇಳದಲ್ಲಿ ಸಹ್ಯಾದ್ರಿ ಸಿಂಧೂರ ತಳಿಯ ಭತ್ತವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದ್ದಾರೆ. ಈಗಾಗಲೇ ಅನೇಕ ಕೆಂಪು ತಳಿಯ ಭತ್ತಗಳಿವೆ. ಆದರೆ, ಈ ಸಹ್ಯಾದ್ರಿ ಸಿಂಧೂರ ತಳಿಯ ಅಕ್ಕಿಯು ಇತರ ಕೆಂಪು ತಳಿಯ ಭತ್ತಕ್ಕಿಂತ ವಿಭಿನ್ನವಾಗಿದೆ. ಇದು ಸಣ್ಣ ಕೆಂಪು ಭತ್ತವಾಗಿದ್ದು, ಇದನ್ನು ಎಲ್ಲರೂ ಸಹ ಊಟಕ್ಕೆ ಬಳಸಬಹುದು.
ಈ ಭತ್ತವನ್ನು ರಾಜ್ಯಾದ್ಯಂತ 40 ಕೇಂದ್ರಗಳಲ್ಲಿ ಪ್ರಯೋಗಿಸಲಾಗಿದ್ದು, ಅತ್ಯಂತ ಯಶಸ್ವಿಯಾಗಿ ಇಳುವರಿ ಬಂದಿದೆ. ಇದು ಒಂದು ಹೆಕ್ಟೇರ್‍ಗೆ 55 ಕ್ವಿಂಟಾಲ್ ಬರುತ್ತದೆ. ಮಲೆನಾಡಿನಲ್ಲಿ ಒಂದು ಹೆಕ್ಟೇರ್ ಗೆ 22 ಕ್ವಿಂಟಾಲ್ ಇಳುವರಿ ಸಿಗುತ್ತದೆ.ಇದರ ಇನ್ನೊಂದು ವಿಶೇಷತೆಯೆಂದರೆ,ಇದು 120 ದಿನದಲ್ಲೇ ಕಟಾವಿಗೆ ಬರುತ್ತದೆ. ಅಲ್ಲದೆ, ಎರಡು ಬೆಳೆಗಳಾಗಿ ಬೆಳೆಯಬಹುದು. ಇದಕ್ಕೆ ಯಾವುದೇ ರೋಗಭಾಧೆಯು ಬಹುಬೇಗ ತಗಲುವುದಿಲ್ಲ. ಇದರಲ್ಲಿ ಕೀಟವೂ ಇರುವುದಿಲ್ಲ. ಪ್ರೋಟೀನ್, ಐರನ್ ಜಿಂಕ್ ಅಂಶವನ್ನು ಹೆಚ್ಚಾಗಿ ಹೊಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

3 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

9 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

9 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago