ಮಹಾರಾಷ್ಟ್ರದ ಥಾಣೆಯ 10 ವರ್ಷದ ಸಾಯಿ ಪಾಟೀಲ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 38 ದಿನಗಳಲ್ಲಿ 3,600 ಕಿ.ಮೀ ಸೈಕ್ಲಿಂಗ್ ಮಾಡಿದ್ದಾಳೆ. ಈ ಬಾಲಕಿ ಈ ಹಿಂದೆ ಮಹಾರಾಷ್ಟ್ರದ ನಗರಗಳ ನಡುವೆ ಸೈಕಲ್ ಸವಾರಿ ಮತ್ತು ಹಲವಾರು ಈಜು ಸ್ಪರ್ಧೆಯ ಮೂಲಕ ದಾಖಲೆಗಳನ್ನು ಮಾಡಿದ್ದಾಳೆ.
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ರಯಾಣವನ್ನು ಮಾಡಬೇಕು ಎಂಬ ಇಚ್ಛೆ ಈಡೇರಿಸಲು ಸಾಯಿ ಪಾಟೀಲ್ ಒಂದು ವರ್ಷದಿಂದ ಅಭ್ಯಾಸ ಮಾಡುತ್ತಿದ್ದಳು. ಈ ಬಾರಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಮಾಡಿರುವಳು ಎಂದು ಸಾಯಿ ಪಾಟೀಲ್ ತಂದೆ ಆಶಿಶ್ ಪಾಟೀಲ್ ಹೇಳಿದರು. ನಾವು ಡಿಸೆಂಬರ್ 16 ರಂದು ಪ್ರಯಾಣವನ್ನು ಪ್ರಾರಂಭಿಸಿ ಜನವರಿ 30 ರಂದು ಪೂರ್ಣಗೊಳಿಸಿದ್ದೇವೆ ಎಂದು ಆಶಿಶ್ ಪಾಟೀಲ್ ಹೇಳಿದರು.
ಸಾಯಿ ಪಾಟೀಲ್ ಅವರ ಈ ಪ್ರಯತ್ನಕ್ಕೆ ಮಹಾರಾಷ್ಟ್ರದ ಹಲವಾರು ಪ್ರದೇಶಗಳಲ್ಲಿ ಜನರು ಇವರನ್ನು ಅಭಿನಂಧಿಸಿದರು. ಇವರ ಶೌರ್ಯ ಮತ್ತು ಸಮರ್ಪಣೆ ಬಗ್ಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…