ಎಂ.ಬಿ.ಎ ಮುಗಿಸಿ ಕೃಷಿಗೆ ಮರಳಿದ ಯುವಕ | ಮೇಕೆ ಸಾಕಾಣಿಕೆಯಿಂದ ಲಾಭ ಗಳಿಸಿದ ರೈತ |

January 31, 2022
7:41 PM

ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಕೃಷಿಗೆ ಮರಳಿ ಯಶಸ್ಸು ಕಂಡಿದ್ದಾರೆ.ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಈಗ ಆದರ್ಶ ಕೃಷಿನಾಗಿದ್ದಾರೆ.

Advertisement
Advertisement

ಮೂಲತಃ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದರು. ತಿಂಗಳಿಗೆ 40 ಸಾವಿರ ಸಂಬಳವನ್ನು ಪಡೆಯುತ್ತಿದ್ದರು. ಕೃಷಿ ಅವರ ಆಸಕ್ತಿಯ ವಿಷಯವಾಗಿತ್ತು. ಹೀಗಾಗಿ ಕೆಲಸವನ್ನು ಬಿಟ್ಟು ಮರಳಿ ಊರಿಗೆ ಬಂದು ಈಗ ಯುವಜನಾಂಗಕ್ಕೆ ಮಾದರಿ ರೈತನಾಗಿದ್ದಾರೆ.

ತನ್ನ ಎಂಟು ಎಕರೆ ಜಮೀನಿನಲ್ಲಿ 6 ಎಕರೆಯಷ್ಟು ಕಬ್ಬು ಹಾಗೂ ಉಳಿದ ಎರಡು ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆಸಿ  ಆಡು ಸಾಕುತ್ತಿದ್ದಾರೆ. ಒಂದು ತಿಂಗಳ ಆಡು ಮರಿಗೆ 16 ರಿಂದ 20 ಸಾವಿರ ಹಣ ಕೊಟ್ಟು ಖರೀದಿ ಮಾಡಿಕೊಂಡು ಹೋಗುತ್ತಾರೆ. ಜಿಲ್ಲೆಯ ರೈತರು ಮಾತ್ರವಲ್ಲ ಮಹಾರಾಷ್ಟ್ರ ರಾಜ್ಯದ ರೈತರು ಸಹಿತ ಸಾಯಿನಾಥ್ ಬಳಿಯಿಂದ ಆಡು ಖರೀದಿ ಮಾಡುತ್ತಾರೆ.

ತಿಂಗಳಿಗೆ ನಲವತ್ತು ಸಾವಿರ ಪಡೆಯುತ್ತಿದ್ದ ಸಾಯಿನಾಥ್ ಶೇರಖಾನ್ ಅವರು ಈಗ ಒಂದು ವರ್ಷದಲ್ಲಿ ಆಡುಗಳಿಂದ ಸುಮಾರು 10 ರಿಂದ 14 ಲಕ್ಷದಷ್ಟು ಆದಾಯ ಗಳಿಸುತ್ತಿದ್ದಾರೆ. ಇವರ ಈ ಮಾದರಿಯಿಂದ ಹಲವಾರು ಯುವ ರೈತರು ಸಹ ಪ್ರೇರಣೆಯನ್ನು ಪಡೆದು ಬದುಕಲು ನೂರು ದಾರಿಯಿದೆ ಛಲವಿದ್ದರೆ ಸಾಕು ಎನ್ನುತ್ತಿದ್ದಾರೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror