MIRROR FOCUS

ಎಂ.ಬಿ.ಎ ಮುಗಿಸಿ ಕೃಷಿಗೆ ಮರಳಿದ ಯುವಕ | ಮೇಕೆ ಸಾಕಾಣಿಕೆಯಿಂದ ಲಾಭ ಗಳಿಸಿದ ರೈತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಕೃಷಿಗೆ ಮರಳಿ ಯಶಸ್ಸು ಕಂಡಿದ್ದಾರೆ.ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಈಗ ಆದರ್ಶ ಕೃಷಿನಾಗಿದ್ದಾರೆ.

Advertisement
Advertisement

ಮೂಲತಃ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದರು. ತಿಂಗಳಿಗೆ 40 ಸಾವಿರ ಸಂಬಳವನ್ನು ಪಡೆಯುತ್ತಿದ್ದರು. ಕೃಷಿ ಅವರ ಆಸಕ್ತಿಯ ವಿಷಯವಾಗಿತ್ತು. ಹೀಗಾಗಿ ಕೆಲಸವನ್ನು ಬಿಟ್ಟು ಮರಳಿ ಊರಿಗೆ ಬಂದು ಈಗ ಯುವಜನಾಂಗಕ್ಕೆ ಮಾದರಿ ರೈತನಾಗಿದ್ದಾರೆ.

ತನ್ನ ಎಂಟು ಎಕರೆ ಜಮೀನಿನಲ್ಲಿ 6 ಎಕರೆಯಷ್ಟು ಕಬ್ಬು ಹಾಗೂ ಉಳಿದ ಎರಡು ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆಸಿ  ಆಡು ಸಾಕುತ್ತಿದ್ದಾರೆ. ಒಂದು ತಿಂಗಳ ಆಡು ಮರಿಗೆ 16 ರಿಂದ 20 ಸಾವಿರ ಹಣ ಕೊಟ್ಟು ಖರೀದಿ ಮಾಡಿಕೊಂಡು ಹೋಗುತ್ತಾರೆ. ಜಿಲ್ಲೆಯ ರೈತರು ಮಾತ್ರವಲ್ಲ ಮಹಾರಾಷ್ಟ್ರ ರಾಜ್ಯದ ರೈತರು ಸಹಿತ ಸಾಯಿನಾಥ್ ಬಳಿಯಿಂದ ಆಡು ಖರೀದಿ ಮಾಡುತ್ತಾರೆ.

ತಿಂಗಳಿಗೆ ನಲವತ್ತು ಸಾವಿರ ಪಡೆಯುತ್ತಿದ್ದ ಸಾಯಿನಾಥ್ ಶೇರಖಾನ್ ಅವರು ಈಗ ಒಂದು ವರ್ಷದಲ್ಲಿ ಆಡುಗಳಿಂದ ಸುಮಾರು 10 ರಿಂದ 14 ಲಕ್ಷದಷ್ಟು ಆದಾಯ ಗಳಿಸುತ್ತಿದ್ದಾರೆ. ಇವರ ಈ ಮಾದರಿಯಿಂದ ಹಲವಾರು ಯುವ ರೈತರು ಸಹ ಪ್ರೇರಣೆಯನ್ನು ಪಡೆದು ಬದುಕಲು ನೂರು ದಾರಿಯಿದೆ ಛಲವಿದ್ದರೆ ಸಾಕು ಎನ್ನುತ್ತಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

9 hours ago

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

24 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

1 day ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

1 day ago