ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಕೃಷಿಗೆ ಮರಳಿ ಯಶಸ್ಸು ಕಂಡಿದ್ದಾರೆ.ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಈಗ ಆದರ್ಶ ಕೃಷಿನಾಗಿದ್ದಾರೆ.
ಮೂಲತಃ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದರು. ತಿಂಗಳಿಗೆ 40 ಸಾವಿರ ಸಂಬಳವನ್ನು ಪಡೆಯುತ್ತಿದ್ದರು. ಕೃಷಿ ಅವರ ಆಸಕ್ತಿಯ ವಿಷಯವಾಗಿತ್ತು. ಹೀಗಾಗಿ ಕೆಲಸವನ್ನು ಬಿಟ್ಟು ಮರಳಿ ಊರಿಗೆ ಬಂದು ಈಗ ಯುವಜನಾಂಗಕ್ಕೆ ಮಾದರಿ ರೈತನಾಗಿದ್ದಾರೆ.
ತನ್ನ ಎಂಟು ಎಕರೆ ಜಮೀನಿನಲ್ಲಿ 6 ಎಕರೆಯಷ್ಟು ಕಬ್ಬು ಹಾಗೂ ಉಳಿದ ಎರಡು ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆಸಿ ಆಡು ಸಾಕುತ್ತಿದ್ದಾರೆ. ಒಂದು ತಿಂಗಳ ಆಡು ಮರಿಗೆ 16 ರಿಂದ 20 ಸಾವಿರ ಹಣ ಕೊಟ್ಟು ಖರೀದಿ ಮಾಡಿಕೊಂಡು ಹೋಗುತ್ತಾರೆ. ಜಿಲ್ಲೆಯ ರೈತರು ಮಾತ್ರವಲ್ಲ ಮಹಾರಾಷ್ಟ್ರ ರಾಜ್ಯದ ರೈತರು ಸಹಿತ ಸಾಯಿನಾಥ್ ಬಳಿಯಿಂದ ಆಡು ಖರೀದಿ ಮಾಡುತ್ತಾರೆ.
ತಿಂಗಳಿಗೆ ನಲವತ್ತು ಸಾವಿರ ಪಡೆಯುತ್ತಿದ್ದ ಸಾಯಿನಾಥ್ ಶೇರಖಾನ್ ಅವರು ಈಗ ಒಂದು ವರ್ಷದಲ್ಲಿ ಆಡುಗಳಿಂದ ಸುಮಾರು 10 ರಿಂದ 14 ಲಕ್ಷದಷ್ಟು ಆದಾಯ ಗಳಿಸುತ್ತಿದ್ದಾರೆ. ಇವರ ಈ ಮಾದರಿಯಿಂದ ಹಲವಾರು ಯುವ ರೈತರು ಸಹ ಪ್ರೇರಣೆಯನ್ನು ಪಡೆದು ಬದುಕಲು ನೂರು ದಾರಿಯಿದೆ ಛಲವಿದ್ದರೆ ಸಾಕು ಎನ್ನುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…