Advertisement
MIRROR FOCUS

ಎಂ.ಬಿ.ಎ ಮುಗಿಸಿ ಕೃಷಿಗೆ ಮರಳಿದ ಯುವಕ | ಮೇಕೆ ಸಾಕಾಣಿಕೆಯಿಂದ ಲಾಭ ಗಳಿಸಿದ ರೈತ |

Share

ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಕೃಷಿಗೆ ಮರಳಿ ಯಶಸ್ಸು ಕಂಡಿದ್ದಾರೆ.ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಈಗ ಆದರ್ಶ ಕೃಷಿನಾಗಿದ್ದಾರೆ.

ಮೂಲತಃ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದರು. ತಿಂಗಳಿಗೆ 40 ಸಾವಿರ ಸಂಬಳವನ್ನು ಪಡೆಯುತ್ತಿದ್ದರು. ಕೃಷಿ ಅವರ ಆಸಕ್ತಿಯ ವಿಷಯವಾಗಿತ್ತು. ಹೀಗಾಗಿ ಕೆಲಸವನ್ನು ಬಿಟ್ಟು ಮರಳಿ ಊರಿಗೆ ಬಂದು ಈಗ ಯುವಜನಾಂಗಕ್ಕೆ ಮಾದರಿ ರೈತನಾಗಿದ್ದಾರೆ.

ತನ್ನ ಎಂಟು ಎಕರೆ ಜಮೀನಿನಲ್ಲಿ 6 ಎಕರೆಯಷ್ಟು ಕಬ್ಬು ಹಾಗೂ ಉಳಿದ ಎರಡು ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆಸಿ  ಆಡು ಸಾಕುತ್ತಿದ್ದಾರೆ. ಒಂದು ತಿಂಗಳ ಆಡು ಮರಿಗೆ 16 ರಿಂದ 20 ಸಾವಿರ ಹಣ ಕೊಟ್ಟು ಖರೀದಿ ಮಾಡಿಕೊಂಡು ಹೋಗುತ್ತಾರೆ. ಜಿಲ್ಲೆಯ ರೈತರು ಮಾತ್ರವಲ್ಲ ಮಹಾರಾಷ್ಟ್ರ ರಾಜ್ಯದ ರೈತರು ಸಹಿತ ಸಾಯಿನಾಥ್ ಬಳಿಯಿಂದ ಆಡು ಖರೀದಿ ಮಾಡುತ್ತಾರೆ.

ತಿಂಗಳಿಗೆ ನಲವತ್ತು ಸಾವಿರ ಪಡೆಯುತ್ತಿದ್ದ ಸಾಯಿನಾಥ್ ಶೇರಖಾನ್ ಅವರು ಈಗ ಒಂದು ವರ್ಷದಲ್ಲಿ ಆಡುಗಳಿಂದ ಸುಮಾರು 10 ರಿಂದ 14 ಲಕ್ಷದಷ್ಟು ಆದಾಯ ಗಳಿಸುತ್ತಿದ್ದಾರೆ. ಇವರ ಈ ಮಾದರಿಯಿಂದ ಹಲವಾರು ಯುವ ರೈತರು ಸಹ ಪ್ರೇರಣೆಯನ್ನು ಪಡೆದು ಬದುಕಲು ನೂರು ದಾರಿಯಿದೆ ಛಲವಿದ್ದರೆ ಸಾಕು ಎನ್ನುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

37 minutes ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

10 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago