ಹುಣಸೆಹಣ್ಣು ಉದ್ಯಮಶೀಲರಿಗೆ ಕೊಯ್ಲು, ಸಂರಕ್ಷಣೆ ಹಾಗೂ ಮಾರಾಟ ಕುರಿತ ಮೂರು ದಿನದ ತರಬೇತಿ ಕಾರ್ಯಗಾರಕ್ಕೆ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಜಯಚಂದ್ರ, ಬೆಂಗಳೂರಿನಲ್ಲಿ ಐಟಿಬಿಟಿಗೆ ಸಂಬಂಧಿಸಿದ ನವೋದ್ಯಮಗಳು 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿವೆ. ಈ ಮೂಲಕ ಹೊಸ ಹೊಸ ಸಂಶೋಧನೆಗೆ ಹೆಚ್ಚಿನ ಒತ್ತು ನೀಡುತ್ತಿವೆ. ಅದೇ ರೀತಿ ಹುಣಸೆಹಣ್ಣು ಬೆಳೆ ಕೊಯ್ಲು, ಸಂರಕ್ಷಣೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ರೈತರಿಗೆ ಸಕಾಲದಲ್ಲಿ ಮಾಹಿತಿ ನೀಡಿದಾಗ, ಹುಣಸೆಹಣ್ಣು ಬೆಳೆಗಾರರೂ ಕೂಡ ಈ ಕೃಷಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತದ ಅಧ್ಯಕ್ಷ , ಬಿ.ಎಚ್. ಹರೀಶ್ ಮಾತನಾಡಿ, ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಹಾಗೂ ಅದಕ್ಕೆ ಸೂಕ್ತ ಬೆಲೆ ಸಿಕ್ಕರೆ ಇನ್ನಷ್ಟು ಮಂದಿ ಹುಣಸೆಹಣ್ಣು ಬೆಳೆಯುವ ಕೆಲಸದಲ್ಲಿ ನಿರತರಾಗುತ್ತಾರೆ ಆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಈ ವೇಳೆ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್.ಕೆ. ಶಿವಕುಮಾರ್, ಡಾ.ಎಂ.ಎಚ್.ಎಂ ಪ್ರತಿಷ್ಠಾನದ ಅಧ್ಯಕ್ಷ ಡಾ. ಕೆ. ನಾರಾಯಣಗೌಡ, ಟ್ರಸ್ಟಿ ಡಾ.ಎಸ್.ವಿ. ಹಿತ್ತಲಮನಿ, ಕಾರ್ಯದರ್ಶಿ ಡಾ.ಎಲ್. ಹನುಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…