ಹುಣಸೆಹಣ್ಣು ಉದ್ಯಮಶೀಲರಿಗೆ ಕೊಯ್ಲು, ಸಂರಕ್ಷಣೆ ಹಾಗೂ ಮಾರಾಟ ಕುರಿತ ಮೂರು ದಿನದ ತರಬೇತಿ ಕಾರ್ಯಗಾರಕ್ಕೆ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಜಯಚಂದ್ರ, ಬೆಂಗಳೂರಿನಲ್ಲಿ ಐಟಿಬಿಟಿಗೆ ಸಂಬಂಧಿಸಿದ ನವೋದ್ಯಮಗಳು 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿವೆ. ಈ ಮೂಲಕ ಹೊಸ ಹೊಸ ಸಂಶೋಧನೆಗೆ ಹೆಚ್ಚಿನ ಒತ್ತು ನೀಡುತ್ತಿವೆ. ಅದೇ ರೀತಿ ಹುಣಸೆಹಣ್ಣು ಬೆಳೆ ಕೊಯ್ಲು, ಸಂರಕ್ಷಣೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ರೈತರಿಗೆ ಸಕಾಲದಲ್ಲಿ ಮಾಹಿತಿ ನೀಡಿದಾಗ, ಹುಣಸೆಹಣ್ಣು ಬೆಳೆಗಾರರೂ ಕೂಡ ಈ ಕೃಷಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತದ ಅಧ್ಯಕ್ಷ , ಬಿ.ಎಚ್. ಹರೀಶ್ ಮಾತನಾಡಿ, ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಹಾಗೂ ಅದಕ್ಕೆ ಸೂಕ್ತ ಬೆಲೆ ಸಿಕ್ಕರೆ ಇನ್ನಷ್ಟು ಮಂದಿ ಹುಣಸೆಹಣ್ಣು ಬೆಳೆಯುವ ಕೆಲಸದಲ್ಲಿ ನಿರತರಾಗುತ್ತಾರೆ ಆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಈ ವೇಳೆ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್.ಕೆ. ಶಿವಕುಮಾರ್, ಡಾ.ಎಂ.ಎಚ್.ಎಂ ಪ್ರತಿಷ್ಠಾನದ ಅಧ್ಯಕ್ಷ ಡಾ. ಕೆ. ನಾರಾಯಣಗೌಡ, ಟ್ರಸ್ಟಿ ಡಾ.ಎಸ್.ವಿ. ಹಿತ್ತಲಮನಿ, ಕಾರ್ಯದರ್ಶಿ ಡಾ.ಎಲ್. ಹನುಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…