ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯವಾಗಿದೆ. ಪ್ರಸಕ್ತ ಮುಂಗಾರಿನಲ್ಲಿ ಕಳಪೆ ಬೀಜಗಳ ಮಾರಾಟದಿಂದ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ 639 ರೈತರಿಗೆ 58 ಲಕ್ಷ ರೂಪಾಯಿ ವಂಚನೆಯಾಗಿದ್ದು, ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಇರುವ ನಿಸರ್ಗ ಸೀಡ್ಸ್ ಕಂಪನಿಯವರು ರೈತರಿಗೆ ಮಾರಿದ್ದ ಮೆಕ್ಕೆಜೋಳದ ಬೀಜಗಳು ಕಳಪೆ ಎಂಬುದನ್ನು ಕೃಷಿ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಬೀಜ ತಯಾರಿಸಿದ್ದ ಕಂಪನಿಯ ಮಾಲೀಕರು ಹಾಗೂ ಬೀಜ ಮಾರಿದ್ದ ಮಳಿಗೆಗಳ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…