ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯವಾಗಿದೆ. ಪ್ರಸಕ್ತ ಮುಂಗಾರಿನಲ್ಲಿ ಕಳಪೆ ಬೀಜಗಳ ಮಾರಾಟದಿಂದ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ 639 ರೈತರಿಗೆ 58 ಲಕ್ಷ ರೂಪಾಯಿ ವಂಚನೆಯಾಗಿದ್ದು, ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಇರುವ ನಿಸರ್ಗ ಸೀಡ್ಸ್ ಕಂಪನಿಯವರು ರೈತರಿಗೆ ಮಾರಿದ್ದ ಮೆಕ್ಕೆಜೋಳದ ಬೀಜಗಳು ಕಳಪೆ ಎಂಬುದನ್ನು ಕೃಷಿ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಬೀಜ ತಯಾರಿಸಿದ್ದ ಕಂಪನಿಯ ಮಾಲೀಕರು ಹಾಗೂ ಬೀಜ ಮಾರಿದ್ದ ಮಳಿಗೆಗಳ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…