ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯವಾಗಿದೆ. ಪ್ರಸಕ್ತ ಮುಂಗಾರಿನಲ್ಲಿ ಕಳಪೆ ಬೀಜಗಳ ಮಾರಾಟದಿಂದ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ 639 ರೈತರಿಗೆ 58 ಲಕ್ಷ ರೂಪಾಯಿ ವಂಚನೆಯಾಗಿದ್ದು, ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಇರುವ ನಿಸರ್ಗ ಸೀಡ್ಸ್ ಕಂಪನಿಯವರು ರೈತರಿಗೆ ಮಾರಿದ್ದ ಮೆಕ್ಕೆಜೋಳದ ಬೀಜಗಳು ಕಳಪೆ ಎಂಬುದನ್ನು ಕೃಷಿ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಬೀಜ ತಯಾರಿಸಿದ್ದ ಕಂಪನಿಯ ಮಾಲೀಕರು ಹಾಗೂ ಬೀಜ ಮಾರಿದ್ದ ಮಳಿಗೆಗಳ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…