ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

September 23, 2022
6:29 PM

ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಸಂಘದ ಕಾರ್ಯನಿರ್ವಹಣೆ ,ಸಾಲ ಮರುಪಾವತಿ ,ಸದಸ್ಯರಿಗೆ ನೀಡಿದ ಸೌಲಭ್ಯಗಳನ್ನು ಪರಿಗಣಿಸಿ ,ಈ ಪ್ರಶಸ್ತಿಯನ್ನು ನೀಡಲಾಗಿದೆ.

ರಾಜ್ಯ ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕರೂ ,ಕೊಡಗು ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರು ಆದ  ಕೊಡಂದೇರ ಬಾಂಡ್ ಗಣಪತಿ ಅವರು ಪಯಸ್ವಿನಿ ಪ್ಯಾಕ್ಸ್ ಅದ್ಯಕ್ಷರಾದ ಅನಂತ್ ಊರುಬೈಲು ಅವರಿಗೆ  ಮಡಿಕೇರಿ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಗದು ಮತ್ತು ಪ್ರಶಸ್ತಿ ಪ್ರದಾನ ಮಾಡಿದರು.

Advertisement

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ  ರಾಜಾರಾಮ ಕಳಗಿ ,ಕಾರ್ಯನಿರ್ವಹಣಾಧಿಕಾರಿ ಆನಂದ ಬಿ.ಕೆ ,ನಿರ್ದೇಶಕ ರಾಮಮೂರ್ತಿ ಉಂಬಳೆ  ಉಪಸ್ಥಿತರಿದ್ದರು. ಸಂಪಾಜೆ ಪಯಸ್ವಿನಿ ಸಹಕಾರ ಸಂಘ ಕಳೆದ ಎರಡು ವರ್ಷಗಳಲ್ಲಿ ತನ್ನ ಅಭಿವೃದ್ಧಿ ಮತ್ತು ದಕ್ಷ ಕಾರ್ಯನಿರ್ವಣೆಗಾಗಿ ಸತತ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು ,ಸಂಘದ ಸದಸ್ಯರ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror