Advertisement
ಸುದ್ದಿಗಳು

ಸಂಪಾಜೆಯಲ್ಲಿ ಆಟಿ ಕೂಟ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ

Share

ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರು, ಚಿಂತಕರಾದ ಚಿದಾನಂದ ಮಾಸ್ಟರ್ ಚೆನ್ನೆಮಣೆ ಆಟ ಆಡುವ ಮೂಲಕ ಉದ್ಘಾಟಿಸಿದರು.ಆರೋಗ್ಯ, ಶಿಕ್ಷಣ ಅಧಿಕಾರಿ ಪ್ರಮೀಳಾ ಸ್ವಚ್ಛತೆ, ಆರೋಗ್ಯ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಸೊಸೈಟಿ ಉಪಾಧ್ಯಕ್ಷರಾದ ಯಮುನಾ ಬಿ. ಎಸ್, ಸೊಸೈಟಿ ನಿರ್ದೇಶಕರಾದ ಜಿ. ಕೆ. ಹಮೀದ್ ಗೂನಡ್ಕ, ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಸುಂದರಿ ಮುಂಡಡ್ಕ, ನಿವೃತ ಅಂಗನವಾಡಿ ಕಾರ್ಯಕರ್ತೆ ಜಯಂತಿ, ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಮೋಹಿನಿ ವಿಶ್ವನಾಥ್(ನಿಶಾ), ನಿಕಟ ಪೂರ್ವ ಎಲ್. ಸಿ. ಆರ್. ಪಿ. ಯಶೋಧ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಎಲ್ ಸಿ ಆರ್ ಪಿ ಸೌಮ್ಯ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ದೀಪಿಕಾ ಪೋಕ್ಸೋ ಲಿಂಗತ್ವ ಆಧಾರಿತ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ಎನ್ ಆರ್ ಎಲ್ ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ವೇತಾ, ಸಂಜೀವಿನಿ ಅಕ್ಕ ಕೆಫೆ, ನಲ್ ಜಲ್ ಮಿತ್ರ, ಒಕ್ಕೂಟದ ಎಲ್ಲಾ ಸಿಬ್ಬಂದಿಗಳ ಕಾರ್ಯ ಚಟುವಟಿಕೆಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಓಲ್ಗಾ ಡಿಸೋಜ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬಂದು ಕೆಲಸ ಮಾಡಿದಾಗ ಮಹಿಳೆಯರು ಸಂಘಟಿತರಾದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್, ವಲಯ ಮೇಲ್ವಿಚಾರಕರಾದ ಮಹೇಶ್ ,ಕೌಶಲ್ಯ ತರಬೇತಿಯ ರೂಪ, ಪಂಚಾಯತ್ ರಾಜ್ ಮೇಲ್ವಿಚಾರಕಿ ಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ದೇವಕಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ವಿಮಲಾ ಪ್ರಸಾದ್, ರಜನಿ ಶರತ್, ಅನುಪಮ, ಲಿಸ್ಸಿ ಮೊನಾಲಿಸಾ, ನಿಕಟ ಪೂರ್ವ ಒಕ್ಕೂಟದ ಅಧ್ಯಕ್ಷರಾದ ಶಿಲ್ಪಾ ಸನತ್, ಕಾರ್ಯದರ್ಶಿ ಕವಿತಾ ಪೆರಂಗೋಡಿ ಒಕ್ಕೂಟದ ಕಾರ್ಯದರ್ಶಿ ಲಲನ, ಸಂಜೀವಿನಿ, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯೆಯರು ಹಾಗೂ ಆಲೆಟ್ಟಿ ಕೃಷಿ ಸಖಿ ಲೋಚನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ಚೈತ್ರಾ, ಹರ್ಷಿತಾ, ಆಶಾ ಕಾರ್ಯಕರ್ತೆಯಾರಾದ ಸವಿತಾ ರೈ, ಸೌಮ್ಯ, ಮೋಹನಾಂಗಿ, ಆಶಾ ವಿನಯ ಕುಮಾರ್  ಆರೋಗ್ಯ ತಪಾಸಣೆ ನಡೆಸಿದರು. ಮೋಹಿನಿ ವಿಶ್ವನಾಥ್ (ನಿಶಾ) ಸ್ವಾಗತಿಸಿ ಕಾಂತಿ ಬಿ ಎಸ್ ಕಾರ್ಯಕ್ರಮ ನಿರೂಪಿಸಿದರು. ಸಂಘಗಳ ಸದಸ್ಯೆಯರು ವಿವಿಧ ಖಾದ್ಯ ತಯಾರಿ ಮಾಡಿ ತಂದಿದ್ದರು. ರುಚಿ ಶುಚಿಯಾದ ಖಾದ್ಯಗಳನ್ನು ತಯಾರಿಸಿ ತಂದಿರುವ ಎಲ್ಲಾ ಸಂಘಗಳಿಗೆ ಬಹುಮಾನ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

6 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

14 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

15 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

1 day ago