ಗ್ರಾಮಕಲ್ಯಾಣದ ಬಗ್ಗೆ ಯೋಚಿಸುತ್ತಾ, ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಸತತವಾಗಿ 3 ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿ, ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯ ಅಭಿವೃದ್ಧಿಯ ಹರಿಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಕಳಗಿ ಇವರ ಸ್ಮರಣಾರ್ಥ ಸಂಪಾಜೆಯ ಆದರ್ಶ ಫ್ರೆಂಡ್ಸ್ ಚೆಡಾವು ಇವರ ಆಶ್ರಯದಲ್ಲಿ ಎರಡು ದಿನಗಳ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.
ಶನಿವಾರ ಬೆಳಗ್ಗೆ ಸಂಪಾಜೆ ಪಯಶ್ವಿನಿ ಸಹಕಾರಿ ಸಂಘದ ಬಾಲಚಂದ್ರ ಕಳಗಿ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವೆಂಕಪ್ಪ ಕಳಗಿ ಇವರು ಉದ್ಘಾಟಿಸಿದರು. ಆದರ್ಶ ಪ್ರೆಂಡ್ಸ್ ಚೆಡಾವು ಇದರ ಅಧ್ಯಕ್ಷರಾದ ಉದಯ ಹನಿಯಡ್ಕ ಸಭಾಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಬಿಜೆಪಿ ಮಡಿಕೇರಿ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಸುಬ್ರಮಣಿ, ಗ್ರಾಮ ಪಂಚಾಯತ್ ಸಂಪಾಜೆ ಕೊಡಗು ಅಧ್ಯಕ್ಷೆ ನಿರ್ಮಲಾ ಭರತ್, ಪಯಶ್ವಿನಿ ಸಹಕಾರಿ ಸಂಘ ಸಂಪಾಜೆ ಅಧ್ಯಕ್ಷ ಅನಂತ ಎನ್.ಸಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಶ್ರೀ ಜಯಾನಂದ ಸಂಪಾಜೆ ಮತ್ತು ಕೊರೊನಾ ವಾರಿಯರ್ಸ್ ಆಗಿ ಶ್ರಮಿಸಿದ ಲೀಲಾಧರ ನೂಜೆಲು ಇವರನ್ನು ಸನ್ಮಾನಿಸಲಾಯಿತು.
ಲೀಲಾವತಿ ಕಲಾಯಿ ಇವರ ಪ್ರಾರ್ಥನೆ ಹಾಡಿದರು. ಯಶೋಧರ ಬಿ ಜೆ ಸ್ವಾಗತಿಸಿದರು, ನಿರಂತ್ ದೇವಸ್ಯ ನಿರೂಪಿಸಿ, ಹರೀಶ್ ನೂಜೇಲು ವಂದಿಸಿದರು. ಸಂಪಾಜೆ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟ ಶುಭಾರಂಭಗೊಂಡಿತು.
ವಾಣಿಜ್ಯ ಮೌಲ್ಯದ ಜಾತಿಗಳ ಮರಗಳನ್ನು ಕಡಿಯುವುದು ಮತ್ತು ಸಾಗಿಸಲು ನಿಯಮಗಳನ್ನು ಸರಳಗೊಳಿಸುವ ಮೂಲಕ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…
ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…
ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…