Advertisement
ಸುದ್ದಿಗಳು

ಸಂಪಾಜೆ | ದಿವಂಗತ ಬಾಲಚಂದ್ರ ಕಳಗಿ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ |

Share

ಗ್ರಾಮಕಲ್ಯಾಣದ ಬಗ್ಗೆ ಯೋಚಿಸುತ್ತಾ, ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಸತತವಾಗಿ 3 ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿ, ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯ ಅಭಿವೃದ್ಧಿಯ ಹರಿಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ  ಬಾಲಚಂದ್ರ ಕಳಗಿ ಇವರ ಸ್ಮರಣಾರ್ಥ ಸಂಪಾಜೆಯ ಆದರ್ಶ ಫ್ರೆಂಡ್ಸ್ ಚೆಡಾವು ಇವರ ಆಶ್ರಯದಲ್ಲಿ ಎರಡು ದಿನಗಳ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.

ಶನಿವಾರ ಬೆಳಗ್ಗೆ  ಸಂಪಾಜೆ ಪಯಶ್ವಿನಿ ಸಹಕಾರಿ ಸಂಘದ ಬಾಲಚಂದ್ರ ಕಳಗಿ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವೆಂಕಪ್ಪ ಕಳಗಿ ಇವರು  ಉದ್ಘಾಟಿಸಿದರು. ಆದರ್ಶ ಪ್ರೆಂಡ್ಸ್ ಚೆಡಾವು ಇದರ ಅಧ್ಯಕ್ಷರಾದ  ಉದಯ ಹನಿಯಡ್ಕ ಸಭಾಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ,  ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಬಿಜೆಪಿ ವಕ್ತಾರ  ಮಹೇಶ್ ಜೈನಿ, ಬಿಜೆಪಿ ಮಡಿಕೇರಿ ಮಂಡಲ ಪ್ರಧಾನ ಕಾರ್ಯದರ್ಶಿ  ಉಮೇಶ್ ಸುಬ್ರಮಣಿ, ಗ್ರಾಮ ಪಂಚಾಯತ್ ಸಂಪಾಜೆ ಕೊಡಗು ಅಧ್ಯಕ್ಷೆ ನಿರ್ಮಲಾ ಭರತ್, ಪಯಶ್ವಿನಿ ಸಹಕಾರಿ ಸಂಘ ಸಂಪಾಜೆ  ಅಧ್ಯಕ್ಷ ಅನಂತ ಎನ್.ಸಿ  ಉಪಸ್ಥಿತರಿದ್ದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಶ್ರೀ ಜಯಾನಂದ ಸಂಪಾಜೆ ಮತ್ತು ಕೊರೊನಾ ವಾರಿಯರ್ಸ್ ಆಗಿ ಶ್ರಮಿಸಿದ ಲೀಲಾಧರ ನೂಜೆಲು ಇವರನ್ನು ಸನ್ಮಾನಿಸಲಾಯಿತು.

ಲೀಲಾವತಿ ಕಲಾಯಿ ಇವರ ಪ್ರಾರ್ಥನೆ ಹಾಡಿದರು. ಯಶೋಧರ ಬಿ ಜೆ  ಸ್ವಾಗತಿಸಿದರು, ನಿರಂತ್ ದೇವಸ್ಯ ನಿರೂಪಿಸಿ, ಹರೀಶ್ ನೂಜೇಲು ವಂದಿಸಿದರು. ಸಂಪಾಜೆ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟ ಶುಭಾರಂಭಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 minutes ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

42 minutes ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

11 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

11 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago