Advertisement
ಸುದ್ದಿಗಳು

ಸಂಪಾಜೆ | ದಿವಂಗತ ಬಾಲಚಂದ್ರ ಕಳಗಿ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ |

Share

ಗ್ರಾಮಕಲ್ಯಾಣದ ಬಗ್ಗೆ ಯೋಚಿಸುತ್ತಾ, ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಸತತವಾಗಿ 3 ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿ, ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯ ಅಭಿವೃದ್ಧಿಯ ಹರಿಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ  ಬಾಲಚಂದ್ರ ಕಳಗಿ ಇವರ ಸ್ಮರಣಾರ್ಥ ಸಂಪಾಜೆಯ ಆದರ್ಶ ಫ್ರೆಂಡ್ಸ್ ಚೆಡಾವು ಇವರ ಆಶ್ರಯದಲ್ಲಿ ಎರಡು ದಿನಗಳ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.

ಶನಿವಾರ ಬೆಳಗ್ಗೆ  ಸಂಪಾಜೆ ಪಯಶ್ವಿನಿ ಸಹಕಾರಿ ಸಂಘದ ಬಾಲಚಂದ್ರ ಕಳಗಿ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವೆಂಕಪ್ಪ ಕಳಗಿ ಇವರು  ಉದ್ಘಾಟಿಸಿದರು. ಆದರ್ಶ ಪ್ರೆಂಡ್ಸ್ ಚೆಡಾವು ಇದರ ಅಧ್ಯಕ್ಷರಾದ  ಉದಯ ಹನಿಯಡ್ಕ ಸಭಾಧ್ಯಕ್ಷತೆ ವಹಿಸಿದ್ದರು.

Advertisement

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ,  ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಬಿಜೆಪಿ ವಕ್ತಾರ  ಮಹೇಶ್ ಜೈನಿ, ಬಿಜೆಪಿ ಮಡಿಕೇರಿ ಮಂಡಲ ಪ್ರಧಾನ ಕಾರ್ಯದರ್ಶಿ  ಉಮೇಶ್ ಸುಬ್ರಮಣಿ, ಗ್ರಾಮ ಪಂಚಾಯತ್ ಸಂಪಾಜೆ ಕೊಡಗು ಅಧ್ಯಕ್ಷೆ ನಿರ್ಮಲಾ ಭರತ್, ಪಯಶ್ವಿನಿ ಸಹಕಾರಿ ಸಂಘ ಸಂಪಾಜೆ  ಅಧ್ಯಕ್ಷ ಅನಂತ ಎನ್.ಸಿ  ಉಪಸ್ಥಿತರಿದ್ದರು.

Advertisement

ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಶ್ರೀ ಜಯಾನಂದ ಸಂಪಾಜೆ ಮತ್ತು ಕೊರೊನಾ ವಾರಿಯರ್ಸ್ ಆಗಿ ಶ್ರಮಿಸಿದ ಲೀಲಾಧರ ನೂಜೆಲು ಇವರನ್ನು ಸನ್ಮಾನಿಸಲಾಯಿತು.

Advertisement

ಲೀಲಾವತಿ ಕಲಾಯಿ ಇವರ ಪ್ರಾರ್ಥನೆ ಹಾಡಿದರು. ಯಶೋಧರ ಬಿ ಜೆ  ಸ್ವಾಗತಿಸಿದರು, ನಿರಂತ್ ದೇವಸ್ಯ ನಿರೂಪಿಸಿ, ಹರೀಶ್ ನೂಜೇಲು ವಂದಿಸಿದರು. ಸಂಪಾಜೆ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟ ಶುಭಾರಂಭಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

6 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago