ಭೂಕಂಪನ -ಭೂಕುಸಿತ | ಮತ್ತೆ ಮತ್ತೆ ಕಂಪಿಸುವ ಭೂಮಿ | ನಿರಂತರ ಸುರಿಯುವ ಮಳೆ | ಚೆಂಬು ಗ್ರಾಮದಲ್ಲಿ ಭಯದೊಂದಿಗೆ ಬದುಕು |

July 2, 2022
10:49 PM

ಕಳೆದ ಐದು ದಿನಗಳಿಂದ ಭೂಮಿ ಕಂಪನದ ಅನುಭವ. ಎರಡು ದಿನಗಳಿಂದ ಧಾರಾಕಾರ ಮಳೆ. ಈ ಎರಡೂ ಕಾರಣಗಳಿಂದ ಕುಸಿಯುತ್ತಿರುವ ಧರೆ. ಈ ನಡುವೆ ನಿತ್ಯದ ಬದುಕು ಸಾಗಿಸುತ್ತಿರುವ ಚೆಂಬು ಗ್ರಾಮದ ಜನತೆ. ಶನಿವಾರ ರಾತ್ರಿ 8.15 ಕ್ಕೆ ಮತ್ತೊಮ್ಮೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ.ಈ ಮೂಲಕ ಏಳನೇ ಬಾರಿ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನರಿಗೆ ಆಗಿದೆ.

Advertisement

ಸಂಪಾಜೆ, ಚೆಂಬು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭೂಕಂಪನವಾಗುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಸುರಿಯುತ್ತಿದೆ. ಭಾರೀ ಮಳೆಯ ಕಾರಣದಿಂದ ಭೂಕುಸಿತ ಸಂಭವಿಸುತ್ತಿದೆ. ಚೆಂಬು ಪ್ರದೇಶದ ಪೂಜಾರಿಗದ್ದೆಯಲ್ಲಿ ಶುಕ್ರವಾರ ರಾತ್ರಿ ಬರೆ ಕುಸಿತಗೊಂಡು ಗಿರಿಧರ ಎಂಬವರ ಮನೆಗೆ ಹಾನಿಯಾಗಿದೆ. ಮನೆಗೆ ಬಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಹಿಟಾಚಿ ಮೂಲಕ ತೆರವುಗೊಳಿಸಿ ಬಳಿಕ ಸ್ಥಳೀಯ ಯುವಕರು ಮಣ್ಣು ತೆರವಿಗೆ ನೆರವಾಗಿದ್ದಾರೆ. ಸ್ಥಳಕ್ಕೆ ಶಾಸಕ ಬೋಪಯ್ಯ ಭೇಟಿ ನೀಡಿದ್ದಾರೆ. ಚೆಂಬು ಗ್ರಾಪಂ ಸದಸ್ಯ ತೀರ್ಥರಾಮ ಅವರು ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಮಳೆಯ ಕಾರಣದಿಂದ ಚೆಂಬು ಪ್ರದೇಶದ ಹಲವು ಕಡೆಗಳಲ್ಲಿ ಆಗಾಗ ಬರೆ ಕುಸಿತ ಉಂಟಾಗುತ್ತಿದೆ. ಸಣ್ಣಪುಟ್ಟ ಬರೆ ಕುಸಿತ ನಡೆಯುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಆಗುತ್ತಿದೆ. ಹಳ್ಳಗಳು ತುಂಬಿ ಹರಿಯುತ್ತಿದೆ.

ಶನಿವಾರ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ 1.8 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ರಾತ್ರಿ 8.15 ಕ್ಕೆ ಮತ್ತೆ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |
April 16, 2025
8:14 AM
by: The Rural Mirror ಸುದ್ದಿಜಾಲ
ಹೊಸರುಚಿ| ಗುಜ್ಜೆ ರೋಲ್
April 16, 2025
8:00 AM
by: ದಿವ್ಯ ಮಹೇಶ್
ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |
April 16, 2025
7:52 AM
by: The Rural Mirror ಸುದ್ದಿಜಾಲ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |
April 16, 2025
7:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group