ಭೂಕಂಪನ -ಭೂಕುಸಿತ | ಮತ್ತೆ ಮತ್ತೆ ಕಂಪಿಸುವ ಭೂಮಿ | ನಿರಂತರ ಸುರಿಯುವ ಮಳೆ | ಚೆಂಬು ಗ್ರಾಮದಲ್ಲಿ ಭಯದೊಂದಿಗೆ ಬದುಕು |

July 2, 2022
10:49 PM

ಕಳೆದ ಐದು ದಿನಗಳಿಂದ ಭೂಮಿ ಕಂಪನದ ಅನುಭವ. ಎರಡು ದಿನಗಳಿಂದ ಧಾರಾಕಾರ ಮಳೆ. ಈ ಎರಡೂ ಕಾರಣಗಳಿಂದ ಕುಸಿಯುತ್ತಿರುವ ಧರೆ. ಈ ನಡುವೆ ನಿತ್ಯದ ಬದುಕು ಸಾಗಿಸುತ್ತಿರುವ ಚೆಂಬು ಗ್ರಾಮದ ಜನತೆ. ಶನಿವಾರ ರಾತ್ರಿ 8.15 ಕ್ಕೆ ಮತ್ತೊಮ್ಮೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ.ಈ ಮೂಲಕ ಏಳನೇ ಬಾರಿ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನರಿಗೆ ಆಗಿದೆ.

Advertisement
Advertisement

ಸಂಪಾಜೆ, ಚೆಂಬು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭೂಕಂಪನವಾಗುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಸುರಿಯುತ್ತಿದೆ. ಭಾರೀ ಮಳೆಯ ಕಾರಣದಿಂದ ಭೂಕುಸಿತ ಸಂಭವಿಸುತ್ತಿದೆ. ಚೆಂಬು ಪ್ರದೇಶದ ಪೂಜಾರಿಗದ್ದೆಯಲ್ಲಿ ಶುಕ್ರವಾರ ರಾತ್ರಿ ಬರೆ ಕುಸಿತಗೊಂಡು ಗಿರಿಧರ ಎಂಬವರ ಮನೆಗೆ ಹಾನಿಯಾಗಿದೆ. ಮನೆಗೆ ಬಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಹಿಟಾಚಿ ಮೂಲಕ ತೆರವುಗೊಳಿಸಿ ಬಳಿಕ ಸ್ಥಳೀಯ ಯುವಕರು ಮಣ್ಣು ತೆರವಿಗೆ ನೆರವಾಗಿದ್ದಾರೆ. ಸ್ಥಳಕ್ಕೆ ಶಾಸಕ ಬೋಪಯ್ಯ ಭೇಟಿ ನೀಡಿದ್ದಾರೆ. ಚೆಂಬು ಗ್ರಾಪಂ ಸದಸ್ಯ ತೀರ್ಥರಾಮ ಅವರು ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಮಳೆಯ ಕಾರಣದಿಂದ ಚೆಂಬು ಪ್ರದೇಶದ ಹಲವು ಕಡೆಗಳಲ್ಲಿ ಆಗಾಗ ಬರೆ ಕುಸಿತ ಉಂಟಾಗುತ್ತಿದೆ. ಸಣ್ಣಪುಟ್ಟ ಬರೆ ಕುಸಿತ ನಡೆಯುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಆಗುತ್ತಿದೆ. ಹಳ್ಳಗಳು ತುಂಬಿ ಹರಿಯುತ್ತಿದೆ.

Advertisement

ಶನಿವಾರ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ 1.8 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ರಾತ್ರಿ 8.15 ಕ್ಕೆ ಮತ್ತೆ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group