ಭೂಕಂಪನ -ಭೂಕುಸಿತ | ಮತ್ತೆ ಮತ್ತೆ ಕಂಪಿಸುವ ಭೂಮಿ | ನಿರಂತರ ಸುರಿಯುವ ಮಳೆ | ಚೆಂಬು ಗ್ರಾಮದಲ್ಲಿ ಭಯದೊಂದಿಗೆ ಬದುಕು |

July 2, 2022
10:49 PM

ಕಳೆದ ಐದು ದಿನಗಳಿಂದ ಭೂಮಿ ಕಂಪನದ ಅನುಭವ. ಎರಡು ದಿನಗಳಿಂದ ಧಾರಾಕಾರ ಮಳೆ. ಈ ಎರಡೂ ಕಾರಣಗಳಿಂದ ಕುಸಿಯುತ್ತಿರುವ ಧರೆ. ಈ ನಡುವೆ ನಿತ್ಯದ ಬದುಕು ಸಾಗಿಸುತ್ತಿರುವ ಚೆಂಬು ಗ್ರಾಮದ ಜನತೆ. ಶನಿವಾರ ರಾತ್ರಿ 8.15 ಕ್ಕೆ ಮತ್ತೊಮ್ಮೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ.ಈ ಮೂಲಕ ಏಳನೇ ಬಾರಿ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನರಿಗೆ ಆಗಿದೆ.

ಸಂಪಾಜೆ, ಚೆಂಬು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭೂಕಂಪನವಾಗುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಸುರಿಯುತ್ತಿದೆ. ಭಾರೀ ಮಳೆಯ ಕಾರಣದಿಂದ ಭೂಕುಸಿತ ಸಂಭವಿಸುತ್ತಿದೆ. ಚೆಂಬು ಪ್ರದೇಶದ ಪೂಜಾರಿಗದ್ದೆಯಲ್ಲಿ ಶುಕ್ರವಾರ ರಾತ್ರಿ ಬರೆ ಕುಸಿತಗೊಂಡು ಗಿರಿಧರ ಎಂಬವರ ಮನೆಗೆ ಹಾನಿಯಾಗಿದೆ. ಮನೆಗೆ ಬಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಹಿಟಾಚಿ ಮೂಲಕ ತೆರವುಗೊಳಿಸಿ ಬಳಿಕ ಸ್ಥಳೀಯ ಯುವಕರು ಮಣ್ಣು ತೆರವಿಗೆ ನೆರವಾಗಿದ್ದಾರೆ. ಸ್ಥಳಕ್ಕೆ ಶಾಸಕ ಬೋಪಯ್ಯ ಭೇಟಿ ನೀಡಿದ್ದಾರೆ. ಚೆಂಬು ಗ್ರಾಪಂ ಸದಸ್ಯ ತೀರ್ಥರಾಮ ಅವರು ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಮಳೆಯ ಕಾರಣದಿಂದ ಚೆಂಬು ಪ್ರದೇಶದ ಹಲವು ಕಡೆಗಳಲ್ಲಿ ಆಗಾಗ ಬರೆ ಕುಸಿತ ಉಂಟಾಗುತ್ತಿದೆ. ಸಣ್ಣಪುಟ್ಟ ಬರೆ ಕುಸಿತ ನಡೆಯುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಆಗುತ್ತಿದೆ. ಹಳ್ಳಗಳು ತುಂಬಿ ಹರಿಯುತ್ತಿದೆ.

ಶನಿವಾರ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ 1.8 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ರಾತ್ರಿ 8.15 ಕ್ಕೆ ಮತ್ತೆ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror