MIRROR FOCUS

ಭೂಕಂಪನ -ಭೂಕುಸಿತ | ಮತ್ತೆ ಮತ್ತೆ ಕಂಪಿಸುವ ಭೂಮಿ | ನಿರಂತರ ಸುರಿಯುವ ಮಳೆ | ಚೆಂಬು ಗ್ರಾಮದಲ್ಲಿ ಭಯದೊಂದಿಗೆ ಬದುಕು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಐದು ದಿನಗಳಿಂದ ಭೂಮಿ ಕಂಪನದ ಅನುಭವ. ಎರಡು ದಿನಗಳಿಂದ ಧಾರಾಕಾರ ಮಳೆ. ಈ ಎರಡೂ ಕಾರಣಗಳಿಂದ ಕುಸಿಯುತ್ತಿರುವ ಧರೆ. ಈ ನಡುವೆ ನಿತ್ಯದ ಬದುಕು ಸಾಗಿಸುತ್ತಿರುವ ಚೆಂಬು ಗ್ರಾಮದ ಜನತೆ. ಶನಿವಾರ ರಾತ್ರಿ 8.15 ಕ್ಕೆ ಮತ್ತೊಮ್ಮೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ.ಈ ಮೂಲಕ ಏಳನೇ ಬಾರಿ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನರಿಗೆ ಆಗಿದೆ.

Advertisement
Advertisement

ಸಂಪಾಜೆ, ಚೆಂಬು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭೂಕಂಪನವಾಗುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಸುರಿಯುತ್ತಿದೆ. ಭಾರೀ ಮಳೆಯ ಕಾರಣದಿಂದ ಭೂಕುಸಿತ ಸಂಭವಿಸುತ್ತಿದೆ. ಚೆಂಬು ಪ್ರದೇಶದ ಪೂಜಾರಿಗದ್ದೆಯಲ್ಲಿ ಶುಕ್ರವಾರ ರಾತ್ರಿ ಬರೆ ಕುಸಿತಗೊಂಡು ಗಿರಿಧರ ಎಂಬವರ ಮನೆಗೆ ಹಾನಿಯಾಗಿದೆ. ಮನೆಗೆ ಬಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಹಿಟಾಚಿ ಮೂಲಕ ತೆರವುಗೊಳಿಸಿ ಬಳಿಕ ಸ್ಥಳೀಯ ಯುವಕರು ಮಣ್ಣು ತೆರವಿಗೆ ನೆರವಾಗಿದ್ದಾರೆ. ಸ್ಥಳಕ್ಕೆ ಶಾಸಕ ಬೋಪಯ್ಯ ಭೇಟಿ ನೀಡಿದ್ದಾರೆ. ಚೆಂಬು ಗ್ರಾಪಂ ಸದಸ್ಯ ತೀರ್ಥರಾಮ ಅವರು ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಮಳೆಯ ಕಾರಣದಿಂದ ಚೆಂಬು ಪ್ರದೇಶದ ಹಲವು ಕಡೆಗಳಲ್ಲಿ ಆಗಾಗ ಬರೆ ಕುಸಿತ ಉಂಟಾಗುತ್ತಿದೆ. ಸಣ್ಣಪುಟ್ಟ ಬರೆ ಕುಸಿತ ನಡೆಯುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಆಗುತ್ತಿದೆ. ಹಳ್ಳಗಳು ತುಂಬಿ ಹರಿಯುತ್ತಿದೆ.

Advertisement

ಶನಿವಾರ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ 1.8 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ರಾತ್ರಿ 8.15 ಕ್ಕೆ ಮತ್ತೆ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…

14 minutes ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

3 hours ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

4 hours ago

ಹೊಸರುಚಿ | ಹಲಸಿನ ಬೀಜದ ಖಾರದ ಕಡ್ಡಿ

ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…

4 hours ago

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು…

12 hours ago

ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…

22 hours ago