Advertisement
MIRROR FOCUS

ಭೂಕಂಪನ -ಭೂಕುಸಿತ | ಮತ್ತೆ ಮತ್ತೆ ಕಂಪಿಸುವ ಭೂಮಿ | ನಿರಂತರ ಸುರಿಯುವ ಮಳೆ | ಚೆಂಬು ಗ್ರಾಮದಲ್ಲಿ ಭಯದೊಂದಿಗೆ ಬದುಕು |

Share

ಕಳೆದ ಐದು ದಿನಗಳಿಂದ ಭೂಮಿ ಕಂಪನದ ಅನುಭವ. ಎರಡು ದಿನಗಳಿಂದ ಧಾರಾಕಾರ ಮಳೆ. ಈ ಎರಡೂ ಕಾರಣಗಳಿಂದ ಕುಸಿಯುತ್ತಿರುವ ಧರೆ. ಈ ನಡುವೆ ನಿತ್ಯದ ಬದುಕು ಸಾಗಿಸುತ್ತಿರುವ ಚೆಂಬು ಗ್ರಾಮದ ಜನತೆ. ಶನಿವಾರ ರಾತ್ರಿ 8.15 ಕ್ಕೆ ಮತ್ತೊಮ್ಮೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ.ಈ ಮೂಲಕ ಏಳನೇ ಬಾರಿ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನರಿಗೆ ಆಗಿದೆ.

Advertisement
Advertisement

ಸಂಪಾಜೆ, ಚೆಂಬು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭೂಕಂಪನವಾಗುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಸುರಿಯುತ್ತಿದೆ. ಭಾರೀ ಮಳೆಯ ಕಾರಣದಿಂದ ಭೂಕುಸಿತ ಸಂಭವಿಸುತ್ತಿದೆ. ಚೆಂಬು ಪ್ರದೇಶದ ಪೂಜಾರಿಗದ್ದೆಯಲ್ಲಿ ಶುಕ್ರವಾರ ರಾತ್ರಿ ಬರೆ ಕುಸಿತಗೊಂಡು ಗಿರಿಧರ ಎಂಬವರ ಮನೆಗೆ ಹಾನಿಯಾಗಿದೆ. ಮನೆಗೆ ಬಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಹಿಟಾಚಿ ಮೂಲಕ ತೆರವುಗೊಳಿಸಿ ಬಳಿಕ ಸ್ಥಳೀಯ ಯುವಕರು ಮಣ್ಣು ತೆರವಿಗೆ ನೆರವಾಗಿದ್ದಾರೆ. ಸ್ಥಳಕ್ಕೆ ಶಾಸಕ ಬೋಪಯ್ಯ ಭೇಟಿ ನೀಡಿದ್ದಾರೆ. ಚೆಂಬು ಗ್ರಾಪಂ ಸದಸ್ಯ ತೀರ್ಥರಾಮ ಅವರು ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಮಳೆಯ ಕಾರಣದಿಂದ ಚೆಂಬು ಪ್ರದೇಶದ ಹಲವು ಕಡೆಗಳಲ್ಲಿ ಆಗಾಗ ಬರೆ ಕುಸಿತ ಉಂಟಾಗುತ್ತಿದೆ. ಸಣ್ಣಪುಟ್ಟ ಬರೆ ಕುಸಿತ ನಡೆಯುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಆಗುತ್ತಿದೆ. ಹಳ್ಳಗಳು ತುಂಬಿ ಹರಿಯುತ್ತಿದೆ.

ಶನಿವಾರ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ 1.8 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ರಾತ್ರಿ 8.15 ಕ್ಕೆ ಮತ್ತೆ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

19 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

19 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago