Advertisement
MIRROR FOCUS

ಭೂಕಂಪನ -ಭೂಕುಸಿತ | ಮತ್ತೆ ಮತ್ತೆ ಕಂಪಿಸುವ ಭೂಮಿ | ನಿರಂತರ ಸುರಿಯುವ ಮಳೆ | ಚೆಂಬು ಗ್ರಾಮದಲ್ಲಿ ಭಯದೊಂದಿಗೆ ಬದುಕು |

Share

ಕಳೆದ ಐದು ದಿನಗಳಿಂದ ಭೂಮಿ ಕಂಪನದ ಅನುಭವ. ಎರಡು ದಿನಗಳಿಂದ ಧಾರಾಕಾರ ಮಳೆ. ಈ ಎರಡೂ ಕಾರಣಗಳಿಂದ ಕುಸಿಯುತ್ತಿರುವ ಧರೆ. ಈ ನಡುವೆ ನಿತ್ಯದ ಬದುಕು ಸಾಗಿಸುತ್ತಿರುವ ಚೆಂಬು ಗ್ರಾಮದ ಜನತೆ. ಶನಿವಾರ ರಾತ್ರಿ 8.15 ಕ್ಕೆ ಮತ್ತೊಮ್ಮೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ.ಈ ಮೂಲಕ ಏಳನೇ ಬಾರಿ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನರಿಗೆ ಆಗಿದೆ.

ಸಂಪಾಜೆ, ಚೆಂಬು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭೂಕಂಪನವಾಗುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಸುರಿಯುತ್ತಿದೆ. ಭಾರೀ ಮಳೆಯ ಕಾರಣದಿಂದ ಭೂಕುಸಿತ ಸಂಭವಿಸುತ್ತಿದೆ. ಚೆಂಬು ಪ್ರದೇಶದ ಪೂಜಾರಿಗದ್ದೆಯಲ್ಲಿ ಶುಕ್ರವಾರ ರಾತ್ರಿ ಬರೆ ಕುಸಿತಗೊಂಡು ಗಿರಿಧರ ಎಂಬವರ ಮನೆಗೆ ಹಾನಿಯಾಗಿದೆ. ಮನೆಗೆ ಬಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಹಿಟಾಚಿ ಮೂಲಕ ತೆರವುಗೊಳಿಸಿ ಬಳಿಕ ಸ್ಥಳೀಯ ಯುವಕರು ಮಣ್ಣು ತೆರವಿಗೆ ನೆರವಾಗಿದ್ದಾರೆ. ಸ್ಥಳಕ್ಕೆ ಶಾಸಕ ಬೋಪಯ್ಯ ಭೇಟಿ ನೀಡಿದ್ದಾರೆ. ಚೆಂಬು ಗ್ರಾಪಂ ಸದಸ್ಯ ತೀರ್ಥರಾಮ ಅವರು ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.

ಮಳೆಯ ಕಾರಣದಿಂದ ಚೆಂಬು ಪ್ರದೇಶದ ಹಲವು ಕಡೆಗಳಲ್ಲಿ ಆಗಾಗ ಬರೆ ಕುಸಿತ ಉಂಟಾಗುತ್ತಿದೆ. ಸಣ್ಣಪುಟ್ಟ ಬರೆ ಕುಸಿತ ನಡೆಯುತ್ತಿದೆ. ಈ ನಡುವೆ ಆಗಾಗ ಭಾರೀ ಮಳೆಯೂ ಆಗುತ್ತಿದೆ. ಹಳ್ಳಗಳು ತುಂಬಿ ಹರಿಯುತ್ತಿದೆ.

ಶನಿವಾರ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ 1.8 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ರಾತ್ರಿ 8.15 ಕ್ಕೆ ಮತ್ತೆ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago