ಸಂಪಾಜೆ ಎಜುಕೇಶನ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್ ಸ್ವಾಗತಿಸಿದರು. ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.
2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ ಯು ಬಿ ಚಕ್ರಪಾಣಿ, ಖಜಾಂಜಿ ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ ಕೆ ಜಿ ಮುರಳೀಧರ, ಸುಬ್ರಹ್ಮಣ್ಯ ಉಪಾಧ್ಯಾಯ, ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್, ಎಸ್ ಕೆ ಮಹಮ್ಮದ್ ಹನೀಫ್, ಕಾರ್ಯಪ್ಪ ಎಚ್ ಎನ್ ಮತ್ತು ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ ಎ ಐತಪ್ಪ ಅವರು ಮರು ಆಯ್ಕೆಯಾದರು.
ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು. ರಾಜಾರಾಮ ಕೀಲಾರು ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.
ಕಾಲೇಜು ಪ್ರಾಂಶುಪಾಲೆ ವೈ ಕೆ ಮಾಲತಿ ವಂದಿಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…