ಸಂಪಾಜೆ ಎಜುಕೇಶನ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಿತಿ ಅಧ್ಯಕ್ಷರಾದ ರಾಜಾರಾಮ ಕೀಲಾರು ಅವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರುಗಿತು.ಕಾರ್ಯದರ್ಶಿ ಎಂ ಶಂಕರನಾರಾಯಣ ಭಟ್ ಸ್ವಾಗತಿಸಿದರು. ಸಭೆಯಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ, ಅನುಮೋದಿಸಲಾಯಿತು.
2022-23 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜಾರಾಮ ಕೀಲಾರು, ಕಾರ್ಯದರ್ಶಿಯಾಗಿ ಎಂ ಶಂಕರನಾರಾಯಣ ಭಟ್, ಉಪಾಧ್ಯಕ್ಷರಾಗಿ ಯು ಬಿ ಚಕ್ರಪಾಣಿ, ಖಜಾಂಜಿ ಬಿ ಆರ್ ಪದ್ಮಯ್ಯ, ಕಾರ್ಯಕಾರಿ ನಿರ್ದೇಶಕರುಗಳಾಗಿ ಕೆ ಜಿ ಮುರಳೀಧರ, ಸುಬ್ರಹ್ಮಣ್ಯ ಉಪಾಧ್ಯಾಯ, ಕೆ ಎಸ್ ಜಯರಾಮ, ನಿರ್ದೇಶಕರುಗಳಾಗಿ ಕೆ ಎಸ್ ನಾರಾಯಣ ಭಟ್, ಪಿ ಎನ್ ಗಣಪತಿ ಭಟ್, ಎಸ್ ಕೆ ಮಹಮ್ಮದ್ ಹನೀಫ್, ಕಾರ್ಯಪ್ಪ ಎಚ್ ಎನ್ ಮತ್ತು ಸಾದಿಕ್ ಎಸ್ ಎ , ಪ್ರಾಂಶುಪಾಲ ಸದಸ್ಯರಾಗಿ ಮಾಲತಿ ವೈ ಕೆ, ನೌಕರರ ಪ್ರತಿನಿಧಿ ಸದಸ್ಯರಾಗಿ ಎ ಐತಪ್ಪ ಅವರು ಮರು ಆಯ್ಕೆಯಾದರು.
ನೂತನ ಕಾರ್ಯಕಾರಿ ನಿರ್ದೇಶಕರಾಗಿ ಡಾ. ಯು ಪಿ ಜಯರಾಮ ಮತ್ತು ನಿರ್ದೇಶಕರಾಗಿ ರಾಮಕೃಷ್ಣ ಕೆ ಆಯ್ಕೆಯಾದರು. ಸಭೆಯಲ್ಲಿ ಮುಂದಿನ ಯೋಜನೆ ಬಗ್ಗೆ ಚರ್ಚಿಸಲಾಯಿತು. ರಾಜಾರಾಮ ಕೀಲಾರು ಅಧ್ಯಕ್ಷೀಯ ನುಡಿಗಳನ್ನಾಡಿ ಎಲ್ಲರೂ ಸಂಸ್ಥೆಯ ಉನ್ನತಿಗೆ ಸಹಕರಿಸಬೇಕು ಎಂದರು.
ಕಾಲೇಜು ಪ್ರಾಂಶುಪಾಲೆ ವೈ ಕೆ ಮಾಲತಿ ವಂದಿಸಿದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…