Advertisement

ಸಂಪಾಜೆ | ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ಫರ್ಧಾ ಕಾರ್ಯಕ್ರಮ

Share

ಸಂಪಾಜೆ ಪೇರಡ್ಕ ಗೂನಡ್ಕದಲ್ಲಿ ಮುಹಮ್ಮದ್ ಪೈಗಂಬರ್ ರವರ ಜನ್ಮದಿನಾಚರಣೆ ಪ್ರಯುಕ್ತ ಶಮೀಮೆ ಮದೀನಾ ಮದರಸ, ವಿದ್ಯಾರ್ಥಿಗಳಿಂದ ಕಲಾ ಸಾಹಿತ್ಯ ಸ್ಪರ್ಧೆಗೆ ಚಾಲನೆ ನೀಡಲಾಯಿತು.

ತೆಕ್ಕಿಲ್ ಮಹಮ್ಮದ್ ಹಾಜಿ ಮೆಮೋರಿಯಲ್ ತಕ್ವೀಯತುಲ್ ಇಸ್ಲಾಂ ಮದರಸ ಪೇರಡ್ಕ ಗೂನಡ್ಕ ಸಂಪಾಜೆ , ಮೋಹಿಯುದ್ದಿನ್ ಜುಮಾ ಮಸ್ಜಿದ್ ಪೇರಡ್ಕ ಗೂನಡ್ಕ ಸಂಪಾಜೆ ಇವುಗಳ ಜಂಟಿ ಆಶ್ರಯದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಕಲಾಸಾಹಿತ್ಯ ಸ್ಪರ್ಧಾ ಕಾರ್ಯಕ್ರಮಕ್ಕೆ ದುವಾ ಮೂಲಕ ಖತೀಬರಾದ ಅಲ್ ಹಾಜ್ ರಿಯಾಸ್ ಫೈಜ್ಹಿ ಚಾಲನೆ ನೀಡಿದರು.

ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಆಲಿ ಹಾಜಿ ವಹಿಸಿದರು. ಮದರಸ ಸದರ್ ನೂರುದ್ದಿನ್ ಅನ್ಸಾರಿ , ಸಹಾಯಕ ಅಧ್ಯಾಪಾಕ ಹಂಸ ಮುಸ್ಲಿಯರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷರಾದ ಆಲಿ ಹಾಜಿ ಧ್ವಜಹರೋಹಣ ನಂತರ ಪೇರಡ್ಕ ವಳಿಯುಲ್ಲಾಹಿ ದರ್ಗಾ ಶರೀಫ್ ವರೆಗೆ ಮೆರವಣಿಗೆ ಹಾಗೂ ದಫ್ ಪ್ರದರ್ಶನ ಏರ್ಪಡಿಸಲಾಗಿತ್ತು. ಮಸ್ಜಿದ್ ಗೌರವ ಅಧ್ಯಕ್ಷ,ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಮಾತನಾಡಿ ಪ್ರವಾದಿಯ ಆದರ್ಶದಲ್ಲಿ ಮುನ್ನಡೆಯಲು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಒಳ್ಳೆಯ ಧಾರ್ಮಿಕ ಶಿಕ್ಷಣ ಪಡೆಯುವಂತೆ ಕರೆ ನೀಡಿ ನಾಡಿನ ಸಮಸ್ತ ಜನತೆಗೆ ಪ್ರವಾದಿಯವರ 1497 ಹುಟ್ಟು ಹಬ್ಬದ ಶುಭಾಶಯ ತಿಳಿಸಿದರು.

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಮಾತನಾಡಿ ಸಮುದಾಯದ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು ಆದರ್ಶ ವಿದ್ಯಾರ್ಥಿಗಳಾಗಿ ಒಳ್ಳೆಯ ಧಾರ್ಮಿಕ ವಿದ್ಯಾಭ್ಯಾಸ ಪಡೆಯಲು ಕರೆ ನೀಡಿ ವಿದ್ಯಾರ್ಥಿಗಳು ದೇಶದ ಸಮುದಾಯದ ಆಸ್ತಿ ಎಂದು ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪಾಂಡಿ ಅಬ್ಬಾಸ್,ಉಪಾಧ್ಯಕ್ಷ ಸಾಜೀದ್ ಆಜ್ಹಹರಿ,ಜಮಾಅತ್ ಕಾರ್ಯದರ್ಶಿ ರಜಾಕ್ ಹಾಜಿ, ಖಜಾಂಜಿ ಪಿ ಕೆ ಉಮ್ಮರ್ ಗೂನಡ್ಕ , ಎಸ್ ಕೆ ಎಸ್ ಎಸ್ ಎಫ್ ನ ಮುನೀರ್ ಧಾರಿಮಿ,ತೆಕ್ಕಿಲ್ ಮೊಹಮ್ಮದ್ ಕುನ್ಜ್ಹಿ ಪೇರಡ್ಕ, ಇಬ್ರಾಹಿಂ ಹಾಜಿ ಕರಾವಳಿ, ಇಬ್ರಾಹಿಂ ಶೆಟ್ಟಿಯಡ್ಕ, ರಝಕ್ ಅಡಿಮರಡ್ಕ, ಸರಕಾರಿ ಉದ್ಯೋಗಿ ರಝಕ್ ಗೂನಡ್ಕ ಸಹಿತ ಜಮಾತಿನ ಮಹಿಳೆಯರ ಸಹಿತ ಹಿರಿಯ ಕಿರಿಯ ಭಾಗವಹಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಕೋವಿಡ್ ನ ಮೂರು ವರ್ಷಗಳ ನಂತರ ಅತ್ಯಂತ ವಿಜೃಂಭಣೆಯಿಂದ ಪ್ರವಾದಿ ಹುಟ್ಟು ಹಬ್ಬವನ್ನು ಜನತೆ ಆಚರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

14 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

14 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

15 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

23 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago