Advertisement
ಸುದ್ದಿಗಳು

ಸಂಪಾಜೆ ದರೋಡೆ ಪ್ರಕರಣ | 4 ಆರೋಪಿಗಳ ಬಂಧನ | ಮುಂದುವರಿದ ತನಿಖೆ |

Share

ಗ್ರಾಮೀಣ ಭಾಗವಾದ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ  ಅಂಬರೀಶ್‌ ಭಟ್‌ ಎಂಬವರ ಮನೆಗೆ  ನುಗ್ಗಿದ ದರೋಡೆಕೋರರು  ಮಚ್ಚು ಹಿಡಿದು ಬೆದರಿಸಿ ಚಿನ್ನ ಹಾಗೂ ಸುಮಾರು 1.8 ಲಕ್ಷ ರೂಪಾಯಿ ದರೋಡೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಸಂಪಾಜೆಯಲ್ಲಿ  ಪೌರೋಹಿತ್ಯ ಹಾಗೂ ಜ್ಯೋತಿಷ್ಯ ಹೇಳುತ್ತಿದ್ದ ಅಂಬರೀಶ್‌ ಅವರ  ಮನೆಗೆ ಮಾ.20  ಭಾನುವಾರ ರಾತ್ರಿ ಸುಮಾರು 8.30  ರ ಹೊತ್ತಿಗೆ ನುಗ್ಗಿದ ದರೋಡೆಕೋರರು  ಅಂಬರೀಶ್‌ ಅವರ ಸೊಸೆ ಹಾಗೂ ಪತ್ನಿಯನ್ನು ಬೆದರಿಸಿ ದರೋಡೆ ಮಾಡಿದ್ದರು. ಈ ಸಮಯದಲ್ಲಿ ಅಂಬರೀಶ್‌ ಭಟ್‌ ಹಾಗೂ ಅವರ ಪುತ್ರ ಮನೆಯಲ್ಲಿ  ಇರಲಿಲ್ಲ.ಈ ಪ್ರಕರಣದ ಬಗ್ಗೆ ಅಂಬರೀಶ್‌ ಅವರ ಸೊಸೆ ಆಶಾ  ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು 4 ಆರೋಪಿಗಳನ್ನು  ಬಂಧಿಸಿದ್ದಾರೆ.

ಪ್ರಕರಣದ ಪತ್ತೆ ಬಗ್ಗೆ ಪೊಲೀಸ್‌ ಅಧೀಕ್ಷಕರಾದ ಸೋನಾವಣೆ ಋಷಿಕೇಶ್‌ ಭಗವಾನ್‌ ಹಾಗೂ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರ್‌ ಚಂದ್ರ ನಿರ್ದೇಶನದಂತೆ ಪೊಲೀಸ್‌ ಉಪಾಧೀಕ್ಷಕ ಗಾನಾ ಪಿ ಕುಮಾರ್‌ ಅವರು ಸುಳ್ಯ ಪೊಲೀಸ್‌ ವೃತ್ತನಿರೀಕ್ಷಕ ನವೀನ್‌ ಚಂದ್ರ ಜೋಗಿ  ನೇತೃತ್ವದಲ್ಲಿ ವಿವಿಧ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ತಮಿಳುನಾಡು ಮೂಲದ ಕಾರ್ತಿಕ್‌(38) ಹಾಗೂ ನರಸಿಂಹನ್‌(40) , ಹಾಸನ ಮೂಲದ ಯದುಕುಮಾರ್‌(33)  ಹಾಗೂ  ದೀಕ್ಷಿತ್‌ (26) ಅವರನ್ನು ಬಂಧಿಸಿ  ನಗದು ಹಾಗೂ ಕೆಲವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಾಹನ ಹಾಗೂ ಮೊಬೈಲ್‌ ವಶ ಪಡೆದು ತನಿಖೆ ಮುಂದುವರಿದಿದೆ, ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಸುಳ್ಯ ಪೊಲೀಸ್‌ ನಿರೀಕ್ಷಕರಾದ ದಿಲೀಪ್‌ ಆರ್‌ , ರತ್ನಕುಮಾರ್‌, ಬಂಟ್ವಾಳ ಠಾಣಾ ಪಿಎಸ್‌ಐ ಹರೀಶ್‌ ಎಂ ಆರ್‌, ಬೆಳ್ಳಾರೆ ಠಾಣಾ ಎಎಸ್‌ಐ ಭಾಸ್ಕರ್‌,   ಪೊಲೀಸ್‌ ಇಲಾಖಾ ಸಿಬಂದಿಗಳಾದ ಜಯರಾಮ್‌, ಉದಯ್‌ ಗೌಡ  , ಅನಿಲ್‌, , ಮಹದೇವ ಪ್ರಸಾದ್‌ , ದೇವರಾಜ್‌, ವಿಜಯಕುಮಾರ್‌  ಭಾಗವಹಿಸಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

21 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago