ಗೇರು ಕೃಷಿ | ಮಾದರಿ ಗ್ರಾಮವಾಗಿ ಸಂಪಾಜೆ ಆಯ್ಕೆ | ವಿವಿಧ ಚಟುವಟಿಕೆ ಬಗ್ಗೆ ವಿಚಾರವಿನಿಮಯ|

July 1, 2025
11:24 PM

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಗೇರು ಕೃಷಿಯಲ್ಲಿ ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗೂ ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರು ಚರ್ಚೆ ನಡೆಸಿದರು.

ಭಾ. ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ದಿನಕರ ಅಡಿಗ ಅವರನ್ನು ವಿಜ್ಞಾನಿ ಡಾ. ಅಶ್ವತಿ ಚಂದ್ರಕುಮಾರ್ ಅವರ ಉಪಸ್ಥಿತಿಯಲ್ಲಿ ಭಾ. ಕೃ. ಅ. ಸಂಸ್ಥೆಯ ನಿರ್ದೇಶಕರು, ಸಂಪಾಜೆ ಗ್ರಾಮದ ಎನ್‌ಆರ್‌ಎಲ್‌ಎಂ ಸಂಜೀವಿನಿ  ಕೃಷಿ ಸಖಿ ಭೇಟಿ ಮಾಡಿದರು. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಸೆಪ್ಟೆಂಬರ್ ತಿಂಗಳಲ್ಲಿ 5 ತಳಿಯ ಗೇರು ಗಿಡಗಳ ವಿತರಣೆ, ಕೃಷಿಕರಿಂದ ಗೇರು ಹಣ್ಣು ಮತ್ತು ಗೇರು ಬೀಜಗಳ ಖರೀದಿ, ಅವುಗಳಿಂದ ವಿವಿಧ ತಿಂಡಿಗಳ ತಯಾರಿಕೆ, ಪಾನೀಯ, ಮೌಲ್ಯವರ್ಧನೆ, ಯಂತ್ರೋಪಕರಣಗಳ ಬಳಕೆ, ತರಬೇತಿ, ಬೆಳೆ ವಿಮೆ, ಕ್ಷೇತ್ರ ವಿಸ್ತರಣೆ ಹೀಗೆ ಹಲವಾರು ವಿಚಾರಗಳ ಕುರಿತು ನಿರ್ದೇಶಕರು ಹಾಗೂ ವಿಜ್ಞಾನಿಗಳ ಜೊತೆ ಮಾಹಿತಿ ಪಡೆಯಲಾಯಿತು. ವಿಜ್ಞಾನಿಗಳಾದ ಡಾ. ಅಶ್ವತಿ ಚಂದ್ರಕುಮಾರ್, ಡಾ. ಜ್ಯೋತಿ ನಿಶಾದ್, ಡಾ. ಮಂಜುನಾಥ್, ಡಾ.ವೀಣಾ ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror