ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಗೇರು ಕೃಷಿಯಲ್ಲಿ ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗೂ ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರು ಚರ್ಚೆ ನಡೆಸಿದರು.
ಭಾ. ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ದಿನಕರ ಅಡಿಗ ಅವರನ್ನು ವಿಜ್ಞಾನಿ ಡಾ. ಅಶ್ವತಿ ಚಂದ್ರಕುಮಾರ್ ಅವರ ಉಪಸ್ಥಿತಿಯಲ್ಲಿ ಭಾ. ಕೃ. ಅ. ಸಂಸ್ಥೆಯ ನಿರ್ದೇಶಕರು, ಸಂಪಾಜೆ ಗ್ರಾಮದ ಎನ್ಆರ್ಎಲ್ಎಂ ಸಂಜೀವಿನಿ ಕೃಷಿ ಸಖಿ ಭೇಟಿ ಮಾಡಿದರು. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಸೆಪ್ಟೆಂಬರ್ ತಿಂಗಳಲ್ಲಿ 5 ತಳಿಯ ಗೇರು ಗಿಡಗಳ ವಿತರಣೆ, ಕೃಷಿಕರಿಂದ ಗೇರು ಹಣ್ಣು ಮತ್ತು ಗೇರು ಬೀಜಗಳ ಖರೀದಿ, ಅವುಗಳಿಂದ ವಿವಿಧ ತಿಂಡಿಗಳ ತಯಾರಿಕೆ, ಪಾನೀಯ, ಮೌಲ್ಯವರ್ಧನೆ, ಯಂತ್ರೋಪಕರಣಗಳ ಬಳಕೆ, ತರಬೇತಿ, ಬೆಳೆ ವಿಮೆ, ಕ್ಷೇತ್ರ ವಿಸ್ತರಣೆ ಹೀಗೆ ಹಲವಾರು ವಿಚಾರಗಳ ಕುರಿತು ನಿರ್ದೇಶಕರು ಹಾಗೂ ವಿಜ್ಞಾನಿಗಳ ಜೊತೆ ಮಾಹಿತಿ ಪಡೆಯಲಾಯಿತು. ವಿಜ್ಞಾನಿಗಳಾದ ಡಾ. ಅಶ್ವತಿ ಚಂದ್ರಕುಮಾರ್, ಡಾ. ಜ್ಯೋತಿ ನಿಶಾದ್, ಡಾ. ಮಂಜುನಾಥ್, ಡಾ.ವೀಣಾ ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…