ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಗೇರು ಕೃಷಿಯಲ್ಲಿ ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗೂ ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರು ಚರ್ಚೆ ನಡೆಸಿದರು.
ಭಾ. ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ದಿನಕರ ಅಡಿಗ ಅವರನ್ನು ವಿಜ್ಞಾನಿ ಡಾ. ಅಶ್ವತಿ ಚಂದ್ರಕುಮಾರ್ ಅವರ ಉಪಸ್ಥಿತಿಯಲ್ಲಿ ಭಾ. ಕೃ. ಅ. ಸಂಸ್ಥೆಯ ನಿರ್ದೇಶಕರು, ಸಂಪಾಜೆ ಗ್ರಾಮದ ಎನ್ಆರ್ಎಲ್ಎಂ ಸಂಜೀವಿನಿ ಕೃಷಿ ಸಖಿ ಭೇಟಿ ಮಾಡಿದರು. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಸೆಪ್ಟೆಂಬರ್ ತಿಂಗಳಲ್ಲಿ 5 ತಳಿಯ ಗೇರು ಗಿಡಗಳ ವಿತರಣೆ, ಕೃಷಿಕರಿಂದ ಗೇರು ಹಣ್ಣು ಮತ್ತು ಗೇರು ಬೀಜಗಳ ಖರೀದಿ, ಅವುಗಳಿಂದ ವಿವಿಧ ತಿಂಡಿಗಳ ತಯಾರಿಕೆ, ಪಾನೀಯ, ಮೌಲ್ಯವರ್ಧನೆ, ಯಂತ್ರೋಪಕರಣಗಳ ಬಳಕೆ, ತರಬೇತಿ, ಬೆಳೆ ವಿಮೆ, ಕ್ಷೇತ್ರ ವಿಸ್ತರಣೆ ಹೀಗೆ ಹಲವಾರು ವಿಚಾರಗಳ ಕುರಿತು ನಿರ್ದೇಶಕರು ಹಾಗೂ ವಿಜ್ಞಾನಿಗಳ ಜೊತೆ ಮಾಹಿತಿ ಪಡೆಯಲಾಯಿತು. ವಿಜ್ಞಾನಿಗಳಾದ ಡಾ. ಅಶ್ವತಿ ಚಂದ್ರಕುಮಾರ್, ಡಾ. ಜ್ಯೋತಿ ನಿಶಾದ್, ಡಾ. ಮಂಜುನಾಥ್, ಡಾ.ವೀಣಾ ಮಾಹಿತಿ ನೀಡಿದರು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…