ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಗೇರು ಕೃಷಿಯಲ್ಲಿ ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗೂ ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರು ಚರ್ಚೆ ನಡೆಸಿದರು.
ಭಾ. ಕೃ. ಸಂ. ಪ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ. ದಿನಕರ ಅಡಿಗ ಅವರನ್ನು ವಿಜ್ಞಾನಿ ಡಾ. ಅಶ್ವತಿ ಚಂದ್ರಕುಮಾರ್ ಅವರ ಉಪಸ್ಥಿತಿಯಲ್ಲಿ ಭಾ. ಕೃ. ಅ. ಸಂಸ್ಥೆಯ ನಿರ್ದೇಶಕರು, ಸಂಪಾಜೆ ಗ್ರಾಮದ ಎನ್ಆರ್ಎಲ್ಎಂ ಸಂಜೀವಿನಿ ಕೃಷಿ ಸಖಿ ಭೇಟಿ ಮಾಡಿದರು. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಆಯ್ಕೆ ಮಾಡಿದ ವಿಚಾರವಾಗಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಸೆಪ್ಟೆಂಬರ್ ತಿಂಗಳಲ್ಲಿ 5 ತಳಿಯ ಗೇರು ಗಿಡಗಳ ವಿತರಣೆ, ಕೃಷಿಕರಿಂದ ಗೇರು ಹಣ್ಣು ಮತ್ತು ಗೇರು ಬೀಜಗಳ ಖರೀದಿ, ಅವುಗಳಿಂದ ವಿವಿಧ ತಿಂಡಿಗಳ ತಯಾರಿಕೆ, ಪಾನೀಯ, ಮೌಲ್ಯವರ್ಧನೆ, ಯಂತ್ರೋಪಕರಣಗಳ ಬಳಕೆ, ತರಬೇತಿ, ಬೆಳೆ ವಿಮೆ, ಕ್ಷೇತ್ರ ವಿಸ್ತರಣೆ ಹೀಗೆ ಹಲವಾರು ವಿಚಾರಗಳ ಕುರಿತು ನಿರ್ದೇಶಕರು ಹಾಗೂ ವಿಜ್ಞಾನಿಗಳ ಜೊತೆ ಮಾಹಿತಿ ಪಡೆಯಲಾಯಿತು. ವಿಜ್ಞಾನಿಗಳಾದ ಡಾ. ಅಶ್ವತಿ ಚಂದ್ರಕುಮಾರ್, ಡಾ. ಜ್ಯೋತಿ ನಿಶಾದ್, ಡಾ. ಮಂಜುನಾಥ್, ಡಾ.ವೀಣಾ ಮಾಹಿತಿ ನೀಡಿದರು.
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…