ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಕಾರಣದಿಂದ ಘಾಟಿ ಪ್ರದೇಶಗಳಲ್ಲಿ ಭೂಕುಸಿತಗಳು ಹೆಚ್ಚಾಗಿದೆ. ಈಗಾಗಲೇ ಶಿರಾಡಿ ಘಾಟಿ , ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ವಾಹನ ಸಂಚಾರಕ್ಕೆ ತೊಡಕಾಗಿದೆ. ಇದೀಗ ಸಂಪಾಜೆ-ಮಡಿಕೇರಿ ಹೆದ್ದಾರಿಯ ಕಾಟಕೇರಿ, ಎರಡನೇ ಮೊಣ್ಣಂಗೇರಿ, ಕರ್ತೋಜಿ ಎಂಬಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಹೀಗಾಗಿ ಭಾರೀ ವಾಹನಗಳ ಓಡಾಟ ಸರಾಗವಾಗಿ ನಡೆದರೆ ಇಲ್ಲೂ ರಸ್ತೆ ಕುಸಿತವಾಗುವ ಸಾಧ್ಯತೆ ಇದೆ.
ಶಿರಾಡಿ ಘಾಟ್ ಪ್ರದೇಶದ ದೋಣಿಗಲ್ ಬಳಿ ರಸ್ತೆ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದೀಗ ತಾತ್ಕಾಲಿಕ ದುರಸ್ತಿ ಕಾರ್ಯ ನಡೆದು ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರವೇ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪ್, ದ್ವಿಚಕ್ರ ವಾಹನಗಳು, ಮಿನಿ ಟೆಂಪೋ, ಸಾರಿಗೆ ಬಸ್ ಗಳಿಗೆ ಮಾತ್ರವೇ ಸದ್ಯ ಅವಕಾಶ ನೀಡಲಾಗಿದೆ.
ಭಾರೀ ಮಳೆಯ ಕಾರಣದಿಂದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ರಸ್ತೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇಲ್ಲಿ ಕೂಡಾ ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರವೇ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಲಘು ವಾಹನ ಮಾತ್ರವೇ ಸದ್ಯ ಓಡಾಟ ನಡೆಸಲು ಸಾಧ್ಯವಿದೆ.
ಸದ್ಯ ಎರಡೂ ಘಾಟಿ ಪ್ರದೇಶದಲ್ಲಿ ಘನ ವಾಹನ ಓಡಾಟಕ್ಕೆ ನಿರ್ಬಂಧವಿದೆ. ಟ್ಯಾಂಕರ್, ರಾಜಹಂಸ, ಐರಾವತ ಕಂಟೇನರ್ ಸಂಪೂರ್ಣ ನಿಷೇಧ ವಿಧಿಸಲಾಗಿದೆ.
ಸಂಪಾಜೆ- ಮಡಿಕೇರಿ ರಸ್ತೆಯ ದೃಶ್ಯ
ಈ ನಡುವೆ ಕೊಡಗು ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಸಂಪಾಜೆ-ಮಡಿಕೇರಿ ರಸ್ತೆಯ ಕಾಟಕೇರಿ ಬಳಿ ಹಾಗೂ ಮದೆನಾಡು ಬಳಿಯ ಕರ್ತೋಜಿಯಲ್ಲಿ ಮತ್ತು ಎರಡನೇ ಮೊಣ್ಣಂಗೇರಿಯಲ್ಲಿ ಮುಖ್ಯ ರಸ್ತೆ ಬಿರುಕು ಬಿಟ್ಟಿದೆ. ಶುಕ್ರವಾರ ಶಾಸಕ ಕೆ ಜಿ ಬೋಪಯ್ಯ ಅವರು ಸ್ಥಳ ಪರಿಶೀಲನೆ ನಡೆಸಿದರು. ಸದ್ಯ ಶಿರಾಡಿ ಹಾಗೂ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಘನ ವಾಹನ ಓಡಾಟಕ್ಕೆ ನಿರ್ಬಂಧ ಇರುವುದರಿಂದ ಎಲ್ಲಾ ಘನ ವಾಹನಗಳು ಸಂಪಾಜೆ ಮೂಲಕವೇ ಬೆಂಗಳೂರು-ಮಂಗಳೂರು ಕಡೆಗೆ ಓಡಾಟ ನಡೆಸುವುದರಿಂದ ರಸ್ತೆಯಲ್ಲಿ ಇನ್ನಷ್ಟು ಬಿರುಕು ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಂಪಾಜೆ-ಮಡಿಕೇರಿ ರಸ್ತೆ ಮೂಲಕ ಭಾರೀ ವಾಹನ ಸಂಚಾರವನ್ನು ಸದ್ಯ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಶಾಸಕ ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…