Advertisement
MIRROR FOCUS

ಶಿರಾಡಿ – ಚಾರ್ಮಾಡಿಯಲ್ಲಿ ಹಗಲು ಸಂಚಾರಕ್ಕೆ ಅನುಮತಿ | ಸಂಪಾಜೆ ಘಾಟಿಯಲ್ಲೂ ಬಿರುಕು |

Share

ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ  ಭಾರೀ ಮಳೆಯ ಕಾರಣದಿಂದ ಘಾಟಿ ಪ್ರದೇಶಗಳಲ್ಲಿ ಭೂಕುಸಿತಗಳು ಹೆಚ್ಚಾಗಿದೆ. ಈಗಾಗಲೇ ಶಿರಾಡಿ ಘಾಟಿ , ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ವಾಹನ ಸಂಚಾರಕ್ಕೆ ತೊಡಕಾಗಿದೆ. ಇದೀಗ ಸಂಪಾಜೆ-ಮಡಿಕೇರಿ ಹೆದ್ದಾರಿಯ ಕಾಟಕೇರಿ, ಎರಡನೇ ಮೊಣ್ಣಂಗೇರಿ, ಕರ್ತೋಜಿ ಎಂಬಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಹೀಗಾಗಿ ಭಾರೀ ವಾಹನಗಳ ಓಡಾಟ ಸರಾಗವಾಗಿ ನಡೆದರೆ ಇಲ್ಲೂ ರಸ್ತೆ ಕುಸಿತವಾಗುವ ಸಾಧ್ಯತೆ ಇದೆ.  

ಮಡಿಕೇರಿ-ಸಂಪಾಜೆ ರಸ್ತೆ

ಶಿರಾಡಿ ಘಾಟ್‌ ಪ್ರದೇಶದ ದೋಣಿಗಲ್‌ ಬಳಿ ರಸ್ತೆ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದೀಗ ತಾತ್ಕಾಲಿಕ ದುರಸ್ತಿ ಕಾರ್ಯ ನಡೆದು ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರವೇ  ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪ್, ದ್ವಿಚಕ್ರ ವಾಹನಗಳು, ಮಿನಿ ಟೆಂಪೋ, ಸಾರಿಗೆ ಬಸ್ ಗಳಿಗೆ ಮಾತ್ರವೇ ಸದ್ಯ ಅವಕಾಶ ನೀಡಲಾಗಿದೆ.

ಭಾರೀ ಮಳೆಯ ಕಾರಣದಿಂದ ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ  ರಸ್ತೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇಲ್ಲಿ ಕೂಡಾ ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರವೇ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಲಘು ವಾಹನ ಮಾತ್ರವೇ ಸದ್ಯ ಓಡಾಟ ನಡೆಸಲು ಸಾಧ್ಯವಿದೆ.

ಸದ್ಯ ಎರಡೂ ಘಾಟಿ ಪ್ರದೇಶದಲ್ಲಿ  ಘನ ವಾಹನ ಓಡಾಟಕ್ಕೆ ನಿರ್ಬಂಧವಿದೆ. ಟ್ಯಾಂಕರ್, ರಾಜಹಂಸ, ಐರಾವತ ಕಂಟೇನರ್ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಸಂಪಾಜೆ- ಮಡಿಕೇರಿ ರಸ್ತೆಯ ದೃಶ್ಯ

ಈ ನಡುವೆ ಕೊಡಗು ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಸಂಪಾಜೆ-ಮಡಿಕೇರಿ ರಸ್ತೆಯ ಕಾಟಕೇರಿ ಬಳಿ ಹಾಗೂ ಮದೆನಾಡು ಬಳಿಯ ಕರ್ತೋಜಿಯಲ್ಲಿ ಮತ್ತು ಎರಡನೇ ಮೊಣ್ಣಂಗೇರಿಯಲ್ಲಿ ಮುಖ್ಯ ರಸ್ತೆ  ಬಿರುಕು ಬಿಟ್ಟಿದೆ. ಶುಕ್ರವಾರ ಶಾಸಕ ಕೆ ಜಿ ಬೋಪಯ್ಯ ಅವರು ಸ್ಥಳ ಪರಿಶೀಲನೆ ನಡೆಸಿದರು. ಸದ್ಯ ಶಿರಾಡಿ ಹಾಗೂ ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ ಘನ ವಾಹನ ಓಡಾಟಕ್ಕೆ ನಿರ್ಬಂಧ ಇರುವುದರಿಂದ ಎಲ್ಲಾ ಘನ ವಾಹನಗಳು ಸಂಪಾಜೆ ಮೂಲಕವೇ ಬೆಂಗಳೂರು-ಮಂಗಳೂರು ಕಡೆಗೆ ಓಡಾಟ ನಡೆಸುವುದರಿಂದ ರಸ್ತೆಯಲ್ಲಿ ಇನ್ನಷ್ಟು ಬಿರುಕು ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಂಪಾಜೆ-ಮಡಿಕೇರಿ ರಸ್ತೆ ಮೂಲಕ ಭಾರೀ ವಾಹನ ಸಂಚಾರವನ್ನು ಸದ್ಯ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಶಾಸಕ ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

3 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

11 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

16 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

16 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

17 hours ago