ತಂತ್ರಜ್ಞಾನ ಅಳವಡಿಕೆ ,ಉತ್ತಮ ಕಾರ್ಯತತ್ಪರತೆಯಲ್ಲಿ ಸಂಪಾಜೆ ಸೊಸೈಟಿ ಮಾದರಿ ಸಂಸ್ಥೆ : ಕೆ.ಜಿ.ಬೋಪಯ್ಯ

April 13, 2022
10:52 AM

ಸಂಪೂರ್ಣ ಡಿಜಿಟಲೀಕರಣದಂತ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ,ಸದಸ್ಯರಿಗೆ ಗುಣಮಟ್ಟದ ಸೇವೆ ,ಸಾಮಾಜಿಕ ಸ್ಪಂದನೆಯಲ್ಲಿ ಸಂಪಾಜೆ ಸೊಸೈಟಿ ಮುಂಚೂಣಿಯಲ್ಲಿದ್ದು ,ಇದು ನಮ್ಮ ಜಿಲ್ಲೆಗೆ ಮಾದರಿ ಸಂಸ್ಥೆಯಾಗಿದೆ ಎಂದು ಮಾಜಿ ವಿಧಾನಸಭಾದ್ಯಕ್ಷ ,ಶಾಸಕ  ಕೆ.ಜಿ.ಬೋಪಯ್ಯ ಹೇಳಿದರು.

ಅವರು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೂ 1.76 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಗೋದಾಮು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.

Advertisement

ಸಂಸ್ಥೆಯ ಅದ್ಯಕ್ಷ  ಅನಂತ್ ಊರುಬೈಲು ಪ್ರಾಸ್ತಾವಿಕವಾಗಿ ಮಾತನಾಡಿ ,ಸಂಸ್ಥೆಯ ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ನೆಲಮಹಡಿಯಲ್ಲಿ 5 ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸುತ್ತಿದ್ದು ,ಮೇಲಿನ ಮಹಡಿಗಳಲ್ಲಿ ಸುಸಜ್ಜಿತ ಕಚೇರಿಯನ್ನು ನಿರ್ಮಿಸುವ ಉದ್ದೇಶವಿದ್ದು ,ಈ ಯೋಜನೆಗೆ ನಬಾರ್ಡ್ ನಿಂದ ಹಣಕಾಸು ನೆರವು ಪಡೆಯುತ್ತಿರುವುದಾಗಿ ತಿಳಿಸಿದರು.

ಸಂಸ್ಥೆಯ ಉಪಾಧ್ಯಕ್ಷ  ರಾಜಾರಾಂ ಕಳಗಿ ,ಅಕ್ರಮ ಸಕ್ರಮ ಸಮಿತಿ ಸದಸ್ಯ  ಸುಬ್ರಹ್ಮಣ್ಯ ಉಪಾಧ್ಯಾಯ, ಸಂಸ್ಥೆಯ ಮಾಜಿ ಅದ್ಯಕ್ಷರುಗಳಾದ  ಬಲ್ಯಮನೆ ಗಣಪತಿ , ಆದಂಕುಂಞ ,ನಿರ್ದೇಶಕರು ,ಸಂಪಾಜೆ ಮತ್ತು ಚೆಂಬು ಗ್ರಾಮದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ,ಸಿಬ್ಬಂದಿ ವರ್ಗದವರು ,ಸದಸ್ಯರು ಉಪಸ್ಥಿತರಿದ್ದರು. ಪುರೋಹಿತರಾದ  ಅಂಬರೀಶ್ ಭಟ್ ವೈದಿಕ ಕಾರ್ಯ ನೆರವೇರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror