ಸಂಪೂರ್ಣ ಡಿಜಿಟಲೀಕರಣದಂತ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ,ಸದಸ್ಯರಿಗೆ ಗುಣಮಟ್ಟದ ಸೇವೆ ,ಸಾಮಾಜಿಕ ಸ್ಪಂದನೆಯಲ್ಲಿ ಸಂಪಾಜೆ ಸೊಸೈಟಿ ಮುಂಚೂಣಿಯಲ್ಲಿದ್ದು ,ಇದು ನಮ್ಮ ಜಿಲ್ಲೆಗೆ ಮಾದರಿ ಸಂಸ್ಥೆಯಾಗಿದೆ ಎಂದು ಮಾಜಿ ವಿಧಾನಸಭಾದ್ಯಕ್ಷ ,ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
ಅವರು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೂ 1.76 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಗೋದಾಮು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.
ಸಂಸ್ಥೆಯ ಅದ್ಯಕ್ಷ ಅನಂತ್ ಊರುಬೈಲು ಪ್ರಾಸ್ತಾವಿಕವಾಗಿ ಮಾತನಾಡಿ ,ಸಂಸ್ಥೆಯ ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ನೆಲಮಹಡಿಯಲ್ಲಿ 5 ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸುತ್ತಿದ್ದು ,ಮೇಲಿನ ಮಹಡಿಗಳಲ್ಲಿ ಸುಸಜ್ಜಿತ ಕಚೇರಿಯನ್ನು ನಿರ್ಮಿಸುವ ಉದ್ದೇಶವಿದ್ದು ,ಈ ಯೋಜನೆಗೆ ನಬಾರ್ಡ್ ನಿಂದ ಹಣಕಾಸು ನೆರವು ಪಡೆಯುತ್ತಿರುವುದಾಗಿ ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷ ರಾಜಾರಾಂ ಕಳಗಿ ,ಅಕ್ರಮ ಸಕ್ರಮ ಸಮಿತಿ ಸದಸ್ಯ ಸುಬ್ರಹ್ಮಣ್ಯ ಉಪಾಧ್ಯಾಯ, ಸಂಸ್ಥೆಯ ಮಾಜಿ ಅದ್ಯಕ್ಷರುಗಳಾದ ಬಲ್ಯಮನೆ ಗಣಪತಿ , ಆದಂಕುಂಞ ,ನಿರ್ದೇಶಕರು ,ಸಂಪಾಜೆ ಮತ್ತು ಚೆಂಬು ಗ್ರಾಮದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ,ಸಿಬ್ಬಂದಿ ವರ್ಗದವರು ,ಸದಸ್ಯರು ಉಪಸ್ಥಿತರಿದ್ದರು. ಪುರೋಹಿತರಾದ ಅಂಬರೀಶ್ ಭಟ್ ವೈದಿಕ ಕಾರ್ಯ ನೆರವೇರಿಸಿದರು.ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…