ಸಂಪೂರ್ಣ ಡಿಜಿಟಲೀಕರಣದಂತ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ,ಸದಸ್ಯರಿಗೆ ಗುಣಮಟ್ಟದ ಸೇವೆ ,ಸಾಮಾಜಿಕ ಸ್ಪಂದನೆಯಲ್ಲಿ ಸಂಪಾಜೆ ಸೊಸೈಟಿ ಮುಂಚೂಣಿಯಲ್ಲಿದ್ದು ,ಇದು ನಮ್ಮ ಜಿಲ್ಲೆಗೆ ಮಾದರಿ ಸಂಸ್ಥೆಯಾಗಿದೆ ಎಂದು ಮಾಜಿ ವಿಧಾನಸಭಾದ್ಯಕ್ಷ ,ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
ಅವರು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೂ 1.76 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಗೋದಾಮು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.
ಸಂಸ್ಥೆಯ ಅದ್ಯಕ್ಷ ಅನಂತ್ ಊರುಬೈಲು ಪ್ರಾಸ್ತಾವಿಕವಾಗಿ ಮಾತನಾಡಿ ,ಸಂಸ್ಥೆಯ ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ನೆಲಮಹಡಿಯಲ್ಲಿ 5 ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸುತ್ತಿದ್ದು ,ಮೇಲಿನ ಮಹಡಿಗಳಲ್ಲಿ ಸುಸಜ್ಜಿತ ಕಚೇರಿಯನ್ನು ನಿರ್ಮಿಸುವ ಉದ್ದೇಶವಿದ್ದು ,ಈ ಯೋಜನೆಗೆ ನಬಾರ್ಡ್ ನಿಂದ ಹಣಕಾಸು ನೆರವು ಪಡೆಯುತ್ತಿರುವುದಾಗಿ ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷ ರಾಜಾರಾಂ ಕಳಗಿ ,ಅಕ್ರಮ ಸಕ್ರಮ ಸಮಿತಿ ಸದಸ್ಯ ಸುಬ್ರಹ್ಮಣ್ಯ ಉಪಾಧ್ಯಾಯ, ಸಂಸ್ಥೆಯ ಮಾಜಿ ಅದ್ಯಕ್ಷರುಗಳಾದ ಬಲ್ಯಮನೆ ಗಣಪತಿ , ಆದಂಕುಂಞ ,ನಿರ್ದೇಶಕರು ,ಸಂಪಾಜೆ ಮತ್ತು ಚೆಂಬು ಗ್ರಾಮದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ,ಸಿಬ್ಬಂದಿ ವರ್ಗದವರು ,ಸದಸ್ಯರು ಉಪಸ್ಥಿತರಿದ್ದರು. ಪುರೋಹಿತರಾದ ಅಂಬರೀಶ್ ಭಟ್ ವೈದಿಕ ಕಾರ್ಯ ನೆರವೇರಿಸಿದರು.ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…