ಗ್ರಾಮೀಣ ಭಾಗವಾದ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಅಂಬರೀಶ್ ಭಟ್ ಎಂಬವರ ಮನೆಗೆ ಭಾನುವಾರ ರಾತ್ರಿ ಮನೆಗೆ ನುಗ್ಗಿದ ದರೋಡೆಕೋರರು ಮಚ್ಚು ಹಿಡಿದು ಬೆದರಿಸಿ ಚಿನ್ನ ಹಾಗೂ ಸುಮಾರು 1.5 ಲಕ್ಷ ರೂಪಾಯಿ ದರೋಡೆ ನಡೆಸಿದ ಘಟನೆ ವರದಿಯಾಗಿದೆ. ಸಂಪಾಜೆಯಲ್ಲಿ ಪೌರೋಹಿತ್ಯ ಹಾಗೂ ಜ್ಯೋತಿಷ್ಯ ಹೇಳುತ್ತಿದ್ದ ಅಂಬರೀಶ್ ಅವರ ಮನೆಗೆ ಭಾನುವಾರ ರಾತ್ರಿ ಸುಮಾರು 8.30 ರ ಹೊತ್ತಿಗೆ ನುಗ್ಗಿದ ದರೋಡೆಕೋರರು ಅಂಬರೀಶ್ ಅವರ ಸೊಸೆ ಹಾಗೂ ಪತ್ನಿಯನ್ನು ಬೆದರಿಸಿ ದರೋಡೆ ಮಾಡಿದ್ದಾರೆ, ಈ ಸಮಯದಲ್ಲಿ ಅಂಬರೀಶ್ ಭಟ್ ಹಾಗೂ ಅವರ ಪುತ್ರ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…