Advertisement
ಸುದ್ದಿಗಳು

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Share

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಸಕ್ತ ಗೇರು ಕೃಷಿಕರು ಮತ್ತು ಈಗಾಗಲೇ ಗೇರು ಬೆಳೆಯುತ್ತಿರುವ ಕೃಷಿಕರಿಗೆ ಅದರ ಮೌಲ್ಯ ವರ್ಧನೆ ಮಾಡುವ ಕುರಿತು ಮಾಹಿತಿ  ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ಗೇರು ಕೃಷಿಯಲ್ಲಿ ಎರಡರಿಂದ ಮೂರು ವರ್ಷಗಳ ತನಕ ಗಿಡಗಳ ಆರೈಕೆಯನ್ನು ಮಾಡುವುದರ ಕುರಿತು ಪೂರ್ಣ ಮಾಹಿತಿ ಕೃಷಿ ವಿಜ್ಞಾನ ಕೇಂದ್ರದಿಂದ ಮಣ್ಣಿನ ಪರೀಕ್ಷೆ ಹಾಗೂ ತರಕಾರಿ ಬೀಜಗಳ ವಿತರಣೆ ಹಾಗೂ ಕೃಷಿಗೆ ಸಂಬಂಧಿಸಿದ  ವಿಚಾರಗಳ  ಬಗ್ಗೆ ಮಾಹಿತಿ ನೀಡಲಾಯಿತು.  ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಕಡೆಯಿಂದ ಕೃಷಿಕರಿಗೆ ಉದ್ಯಮಿದಾರರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಉಚಿತವಾಗಿ ಮುಂದಿನ ದಿನಗಳಲ್ಲಿ ಸಿಗಲಿರುವ ಸಾಲ ಸೌಲಭ್ಯ, ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆ, ಮಾರುಕಟ್ಟೆ ಬಗ್ಗೆಯೂ ಮಾಹಿತಿ ನೀಡಲಾಯಿತು.

ಕಾರ್ಯಗಾರವು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಗೇರು ಸಂಶೋಧನಾಲಯ ನಿರ್ದೇಶಕ  ಡಾ. ದಿನಕರ ಅಡಿಗ  ನೀರು ಹಾಕುವ ಮೂಲಕ ಉದ್ಘಾಟಿಸಿದರು.  ಕೃಷಿಕರಿಗೆ ಪೂರಕ ವಾತಾವರಣ ಹಾಗೂ ಗೇರು ಕೃಷಿಯ ಮಹತ್ವದ ಬಗ್ಗೆ ಸಂಪಾಜೆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಿ ಕೃಷಿಕರಿಗೆ ಗೇರು ಕೃಷಿ ಬಗ್ಗೆ ಮಾಹಿತಿ ನೀಡಿದರು. ಗೇರು ಕೃಷಿ ಮಾಹಿತಿಯನ್ನು ಕೃಷಿಕರಿಗೆ ತಲುಪಿಸಲು  ಕೃಷಿ ಸಖಿ ಮೋಹಿನಿ ಹಾಗೂ ಗ್ರಾಮ ಪಂಚಾಯತ್ ಸಹಕಾರ ನೀಡುತ್ತಿದೆ ಎಂದರು.

ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಕೆ.ಇ.ಜಯರಾಂ ಮಾತನಾಡಿ ಸಂಪಾಜೆ ಗ್ರಾಮ ಜಿಲ್ಲೆಯ ಕೊನೆಯ ಪಂಚಾಯತ್ ಮಾದರಿ ಗ್ರಾಮ ಕೃಷಿಕರು ಹೆಚ್ಚಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿ ಉತ್ತಮ ಫಲಿತಾಂಶ ತರಲು ಪ್ರಯತ್ನಿಸಿ ಎಂದರು.

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಡಿಕಾರಿ ರಾಜಣ್ಣ, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರುಗಳು ಹೆಚ್ಚು ಮುತುವರ್ಜಿ ವಹಿಸಿ ಕೆಲಸ ಮಾಡುತ್ತಾರೆ. ಹಾಗೂ ಎಲ್ಲಾ ಮೂಲಗಳಿಂದ ಅನುದಾನ ತರಿಸಿ ಕೆಲಸ ಮಾಡಿ ಮಾದರಿ ಗ್ರಾಮವನ್ನಾಗಿ ಮಾಡಿದ್ದಾರೆ ಎಂದರು.   ಡಾ ರಮೇಶ್ ಕೆ. ವಿ. ಕೆ ಸಂಸ್ಥೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು . ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಸಂಜೀವಿನಿ ಎನ್ ಆರ್ ಎಲ್ ಎಂ ಶ್ವೇತ ಅವರ ಸಹಕಾರ ಇದೆ ಎಂದು ತಿಳಿಸಿದರು.

ಡಾ ಮಲ್ಲಿಕಾರ್ಜುನ , ಡಾ.ಜ್ಯೋತಿ ನಿಶಾದ್, ಡಾ, ಶಿವಕುಮಾರ್ , ಡಾ. ರವೀಂದ್ರ ಪಾಟೀಲ್,ಡಾ. ಅಶ್ವತಿ ಚಂದ್ರಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಸಹಕರಿಸಿದ್ದರು.
ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿoಗಾಜೆ, ಕೃಷಿಕರು  ಕಾರ್ಯಾಗಾರದಲ್ಲಿ ಪಾಲ್ಗೊಂಡು ಸರಕಾರದಿಂದಿಂದ ಸವಲತ್ತು ಪಡಕೊಂಡು ಉತ್ರಮ ಕೃಷಿಕರಾಗಿ ಎಂದರು.  ಮಡಪ್ಪಾಡಿ ಕೃಷಿ ಸಖಿ ಪುಷ್ಪಲತಾ, ಆಲೆಟ್ಟಿ ಕೃಷಿ ಸಖಿ ಲೋಚನ, ಅಜ್ಜಾವರ ಕೃಷಿ ಸಖಿ ಪೂರ್ಣಿಮಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಸಾದ ಶೆಟ್ಟಿ, ಹರಿಪ್ರಸಾದ್ ,ಶ್ವೇತಾ, ಜೀವನ್ ಪ್ರಕಾಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಗ್ರಾಮ ಪಂಚಾಯತ್ ಸದಸ್ಯರುಗಳಾದ ಜಗದೀಶ್ ರೈ,ಸುಂದರಿ ಮುಂಡಡ್ಕ, ವಿಮಲಾ ಪ್ರಸಾದ್, ಅನುಪಮ, ರಜನಿ ಶರತ್ ,ಸುಶೀಲಾ. ಮಾಜಿ ಅಧ್ಯಕ್ಷರಾದ ಜಗದೀಶ್ ಕೆ ಪಿ. ಯಮುನಾ, ಮಾಜಿ ಸದಸ್ಯರಾದ ರಾಮಚಂದ್ರ ಕಲ್ಲಗದ್ದೆ, ಸೊಸೈಟಿ ನಿರ್ದೇಶರಾದ ಗಣಪತಿ ಭಟ್,ನಾಗೇಶ್ ಪಿ ಆರ್, ಚಿದಾನಂದ ಮಾಸ್ತರ್, ಆರೋಗ್ಯ ಇಲಾಖೆಯ ಚಿತ್ರಾ, ಪಂಚಾಯತ್ ಸಿಬ್ಬಂದಿ ವರ್ಗ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಸದಸ್ಯರು, ಪಶು ಸಖಿ ಮಾಲತಿ ,ಎಲ್ ಸಿ.ಆರ್ ಪಿ. ಉಪಸ್ತಿತರಿದ್ದರು.

ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸ್ವಾಗತಿಸಿ. ಸದಸ್ಯರಾದ ಜಿ ಕೆ.ಹಮೀದ್ ಗೂನಡ್ಕ ವಂದಿಸಿದರು ಕೃಷಿ ಸಖಿ ಮೊಹಿನಿ ವಿಶ್ವನಾಥ್ ( ನಿಶಾ ) ಹಾಗೂ ಎಂ, ಬಿ. ಕೆ. ಕಾಂತಿ ಬಿ. ಎಸ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

2 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

13 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

17 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

21 hours ago